ನೆ.ಮುಡ್ನೂರು ವೃದ್ಧ ಆತ್ಮಹತ್ಯೆ

0

ಪುತ್ತೂರು : ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ 80 ವರ್ಷದ ವೃದ್ಧರೊಬ್ಬರು ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.5 ರಂದು ನಡೆಯಿತು.

ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕ ನಿವಾಸಿ ಮಾಲಿಂಗ ನಾಯ್ಕ(80) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಡಿ.5 ರಂದು ಅವರು ಮನೆಯ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ಮೃತರ ಪುತ್ರಿ ಭಾಗಿ ಅವರು ನೀಡಿದ ದೂರಿನಂತೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here