ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಪ್ರಕರಣ- ಬಂಧಿತ ಆರೋಪಿಗೆ ಜಾಮೀನು

0

ಪುತ್ತೂರು: ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು, ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪ ಹೊತ್ತಿರುವ ಕಡಬದ ಯeಶ್‌ಗೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.


ಘಟನೆಯ ಹಿನ್ನಲೆ :
ದಿನಾಂಕ 10/10/2023 ರಂದು ಬೆಳಿಗ್ಗೆ 07:30 ಗಂಟೆಗೆ ಅಪ್ರಾಪ್ತ ಬಾಲಕಿಯು ತನ್ನ ಮನೆಯಿಂದ ಹೊರಡುವಾಗ ತನಗೆ ಇನ್ನು ಮೂರು ದಿನ ವಿಶೇಷ ತರಗತಿಯಿದ್ದು, ಬೊಳುವಾರಿನ ತನ್ನ ಗೆಳತಿಯ ಮನೆಗೆ ಹೋಗಿ ಶುಕ್ರವಾರದಂದು ಸಂಜೆ ಮನೆಗೆ ಬರುವುದಾಗಿ ತಿಳಿಸಿ ಕಾಲೇಜಿಗೆ ಹೋಗಿದ್ದರು. ಬಳಿಕ ಆಕೆ ಮನೆಗೆ ಫೋನ್ ಮಾಡದೆ ಇರುವುದರಿಂದ, ಆಕೆಯ ಸ್ನೇಹಿತೆಯಲ್ಲಿ ವಿಚಾರಿಸಿದಾಗ, ಅವಳು ಸ್ನೇಹಿತೆಯ ಮನೆಗೆ ಹೋಗದೆ ಇರುವ ವಿಚಾರ ತಿಳಿಯಿತು. ಬಳಿಕ ಕಾಲೇಜಿನಲ್ಲಿ ವಿಚಾರಿಸಿದಾಗ, ಮಧ್ಯಾಹ್ನದವರೆಗೆ ಕಾಲೇಜಿಗೆ ಬಂದು ನಂತರ ಬಂದಿರುವುದಿಲ್ಲ ಎಂದು ಮಾಹಿತಿ ಲಭಿಸಿತ್ತು. ಅಪ್ರಾಪ್ತ ಬಾಲಕಿಯ ತಂದೆ ಈ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಖ್ಯೆಯ ಕಲಂ 363 ರಂತೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ಅಪ್ರಾಪ್ತ ಬಾಲಕಿಯು ತನ್ನ ತಂದೆಯೊಂದಿಗೆ 13/10/2023ರಂದು ಪೊಲೀಸ್ ಠಾಣೆಗೆ ಹಾಜರಾಗಿ, ಆರೋಪಿಯನ್ನು ತಾನು ಕಳೆದ ಮೂರು ತಿಂಗಳಿನಿಂದ ಪ್ರೀತಿಸುತ್ತಿದ್ದು, 10 /10 /2023 ರಂದು ಮಡಿಕೇರಿಗೆ ಹೋಗಿ ಅಲ್ಲಿ ಆರೋಪಿಯ ಅತ್ತೆ ಮನೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿರುವುದಾಗಿ ಹೇಳಿಕೆಯನ್ನು ನೀಡಿದ್ದರು. ಈ ಆಧಾರದಲ್ಲಿ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ ಕಾಯಿದೆಯ ಕಲಂ 4ರನ್ವಯ ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿ, ಆರೋಪಿ ಯಜ್ಞೇಶ್‌ರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.


ಆರೋಪಿಯು ತನ್ನ ಪರ ವಕೀಲರಾದ ಮಹೇಶ್ ಕಜೆ ಅವರ ಮುಖಾಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ -ಪ್ರತಿವಾದವನ್ನು ಆಲಿಸಿದ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಽಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್ ವಿ ರವರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

LEAVE A REPLY

Please enter your comment!
Please enter your name here