ಲೋಕಸಭೆಯ ಕಲಾಪದ ಅನುವಾದಕರಾಗಿ ಸುಬ್ರಹ್ಮಣ್ಯದ ಡಾ| ಗೋವಿಂದ ಎನ್.ಎಸ್. ನೇಮಕ

0

ಸುಬ್ರಹ್ಮಣ್ಯ: ಲೋಕಸಭೆಯ ಕಲಾಪದಲ್ಲಿ ಆಗುವ ಚರ್ಚೆಗಳನ್ನು ಆಂಗ್ಲ ಹಾಗೂ ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್‌ ಇಂಟಪ್ರಿಟರ್‌ ಹುದ್ದೆಗೆ ಸುಬ್ರಹ್ಮಣ್ಯ ಸಮೀಪದ  ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲುವಿನ ಡಾ| ಗೋವಿಂದ ಎನ್‌.ಎಸ್‌. ನೇಮಕಗೊಂಡಿದ್ದಾರೆ. ಲೋಕಸಭೆಯ ಅಧಿವೇಶನದಲ್ಲಿನ ಕಾರ್ಯಕಲಾಪಗಳನ್ನು ಭಾರತೀಯ ವ್ಯವಸ್ಥೆಗೆ ಭಾಷಾಂತರಿಸುವ ಸಲುವಾಗಿ ಹೊಸ ಸಂಸತ್‌ ಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಿರುವ ಎಲ್ಲ ಭಾಷೆಗಳಲ್ಲೂ ತಲಾ 5 ಕನ್ಸಲ್ಟಂಟ್‌ ಹುದ್ದೆಗಳನ್ನು ಸೃಷ್ಟಿಸಲಾಗಿದೆ.
ಕನ್ನಡಕ್ಕೆ ಭಾಷಾಂತರ ಹುದ್ದೆಗೆ 15 ಮಂದಿ ಅರ್ಜಿ ಸಲ್ಲಿಸಿದ್ದು, 10 ಮಂದಿಯನ್ನು ಆಯ್ಕೆ ಮಾಡಲಾಗಿತ್ತು, ನಾಲ್ವರು ನೇಮಕಗೊಂಡಿದ್ದಾರೆ. ಅವರಲ್ಲಿ ಮೂವರು ದಿಲ್ಲಿಯ ಕನ್ನಡಿಗರಾಗಿದ್ದು, ಗೋವಿಂದ ಎನ್‌.ಎಸ್‌. ಕರ್ನಾಟಕ(ದಕ್ಷಿಣ ಕನ್ನಡ) ದವರಾಗಿದ್ದಾರೆ. ಈ ಮೊದಲೇ ಒರ್ವರು ಪೂರ್ಣಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here