ನಾಳೆ(ಡಿ.8) ಕೆದಂಬಾಡಿ ಗ್ರಾಪಂ ವಿಶೇಷ ಗ್ರಾಮಸಭೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮತ್ತು 14 ನೇ ಹಣಕಾಸು ಹಾಗೂ 15 ನೇ ಹಣಕಾಸು ಯೋಜನೆಯ 2022-23 ನೇ ಸಾಲಿನ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಡಿ.8 ರಂದು ಬೆಳಿಗ್ಗೆ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ವಲಯ ಅರಣ್ಯಾಧಿಕಾರಿ ಉಪ್ಪಿನಂಗಡಿ ವಲಯದ ಜಯಪ್ರಕಾಶ್ ಕೆ.ಕೆರವರು ಸಭಾಧ್ಯಕ್ಷತೆ ವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸುವಂತೆ ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತ, ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್, ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಕಾರ್ಯದರ್ಶಿ ಸುನಂದ ಬಿ.ರೈ ಹಾಗೂ ಗ್ರಾಪಂ ಸದಸ್ಯರುಗಳು, ಸಿಬ್ಬಂದಿ ವರ್ಗದವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here