ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

0

ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬೆಟ್ಟಂಪಾಡಿಯಲ್ಲಿ ನಡೆದಿದೆ.
ನಿಡ್ಪಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45 ವ) ರವರು ಮೃತಪಟ್ಟ ಕಾರ್ಮಿಕ. ಇವರು ಗುರುವಾರ ಬೆಳಿಗ್ಗೆ ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಅಡಿಕೆ ಕೊಯ್ಯಲು ತೆರಳಿದ್ದರು. ಅಡಿಕೆ ಕೊಯ್ಯುವ ವೇಳೆ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಸಯ್ಯದ್ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ ಒಂದು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here