ಕಡೇಶಿವಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ

0

ಮಕ್ಕಳ ಕಲಾ ಲೋಕ ಸಾಂಸ್ಕೃತಿಕ ವೈಭವ ಮಕ್ಕಳ ಧ್ವನಿ


ಕಡೇಶಿವಾಲಯ: ಮಕ್ಕಳ ಕಲಾಲೋಕ ಕ.ಸಾ.ಪ ಬಂಟ್ವಾಳ ತಾಲೂಕು 17 ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದಲ್ಲಿ ಮಿತ್ತಿಮಾರು ಭುಜಂಗ ಶೆಟ್ಟಿ ಸಭಾಂಗಣ ಪಲಿಮಾರು ಜನಾರ್ದನ ಪೈ ವೇದಿಕೆಯಲ್ಲಿ ಡಿ.6ರಂದು ನಡೆಯಿತು.

ಕಡೇಶಿವಾಲಯ ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್. ರಾವ್ ಮೆರವಣಿಗೆ ಉದ್ಘಾಟಿಸಿದರು.ಎಸ್.ಡಿ.ಎಸ್.ಸಿ ಅಧ್ಯಕ್ಷ ಹರಿಶ್ಚಂದ್ರ ಎಮ್ ಕನ್ನಡ ಧ್ಜಜಾರೋಹಣ ನೆರವೇರಿಸಿದರು. ಕ.ಸಾ.ಪ. ದ ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಮಹಮ್ಮದ್ ಪಿ. ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡಿದರು.

ದ.ಕ.ಜಿ.ಪ ಹಿ.ಪ್ರಾ. ಶಾಲೆ ಓಜಾಲ ಶಾಲೆಯ ವಿದ್ಯಾರ್ಥಿನಿ ಶ್ರುತಿಕಾ ಬಾಕಿಮಾರು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಮಕ್ಕಳ ಕಲಾಲೋಕ ಉತ್ತಮ ವೇದಿಕೆಯಾಗಿದೆ ಎಂದರು. ಕಡೇಶಿವಾಲಯ ಶಾಲೆಯ ಸಾನ್ವಿ ಸುವರ್ಣ ಸಮ್ಮೇಳನಾಧ್ಯಕ್ಷತೆ ವಹಿಸಿ ಮಾತನಾಡಿ ಗುರುಗಳ ಮಾರ್ಗದರ್ಶನದಿಂದ ಹೆತ್ತವರ ಆಶೀರ್ವಾದದಿಂದ ಸಮ್ಮೇಳನಾಧ್ಯಕ್ಷೆಯಾಗುವ ಅವಕಾಶ ಸಿಕ್ಕಿತು. ಸಾಹಿತ್ಯದ ಪರಿಚಯವನ್ನು ಮಾಡುವ ಮೂಲಕ ಅಭಿರುಚಿಯನ್ನು ಹುಟ್ಟಿಸಿದೆ.ಬರೆಯುವ ಆಸಕ್ತಿಯನ್ನು ಮೂಡಿಸುವುದಕ್ಕೆ ಸಮ್ಮೇಳನವು ಸಹಕಾರಿಯಾಗಿದೆ ಎಂದು ಅಭಿಪ್ರಾಯ ತಿಳಿಸಿದರು.

ಕವಿ ವಿಶ್ವನಾಥ ಕುಲಾಲ್ ಮಿತ್ತೂರು , ಶರಣ್ಯ ಪಾಂಡೇಲು ಓಜಾಲ ಇವರ ಹಾಯ್ಕು , ಶ್ರುತಿಕಾ ಪಾಂಡೇಲು ಇವರ ಜಗದ ನಿಯಮ, ನಿರಂಜನ ನಾಯಕ್ ವಿಟ್ಲ ಸಂಪಾದಿಸಿದ ಮಕ್ಕಳ ಕವನ ಸಂಕಲನ ಕೃತಿಗಳನ್ನು ಬಿಡುಗಡೆ ಮಾಡಿದರು.


ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಿಳಿಯೂರು ಗುತ್ತು ಕಿಟ್ಟಣ್ಣ ಶೆಟ್ಟಿ, ಕಾರ್ಯಾಧ್ಯಕ್ಷ ಹರಿಶ್ಚಂದ್ರ ಎಮ್ .ಕ್ಷೇತ್ರಶಿಕ್ಷಣಾಧಿಕಾರಿ ಮಂಜುನಾಥ ಎಮ್.ಜಿ., ಉಪಾಧ್ಯಕ್ಷ ಗಿರಿಯಪ್ಪ ಗೌಡ ಶಾಂತಿಲ , ಕೋಶಾಧಿಕಾರಿ ಮಾಧವ ರೈ ಅಮೈ,ಕಡೇಶಿವಾಲಯ ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ಹಾಗೂ ಶಿಕ್ಷಕ ವೃಂದದವರು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.


ರಂಜಿಸಿದ ನೀತಿ ಬೋಧಕ ಕಿರು ನಾಟಕಗಳು
ವಿವಿಧ ಶಾಲೆಗಳಿಂದ ಆಗಮಿಸಿದ ಮಕ್ಕಳು 11 ಕಿರು ನಾಟಕಗಳನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡಿದರು. ನೀತಿ ಬೋಧಕ ಕತೆಗಳನ್ನು ಆಯ್ದು ನಾಟಕ ರೂಪದಲ್ಲಿ ಅಭಿನಯಿಸಿದರು.


ಕವಿಗಳ ಕವನಗಳ ಚಿತ್ತಚಿತ್ತಾರ
ಚಿತ್ತಚಿತ್ತಾರ ಕಾರ್ಯಕ್ರಮದಲ್ಲಿ 14 ಶಾಲೆಗಳ ವಿದ್ಯಾರ್ಥಿಗಳು ಬಂಟ್ವಾಳ ತಾಲೂಕಿನ ಹಿರಿಯ ಕವಿ ಜಯಾನಂದ ಪೆರಾಜೆ , ಸೀತಾಲಕ್ಷ್ಮೀ ವರ್ಮ ವಿಟ್ಲ, ಸವಿತಾ ಅಡ್ವಾಯಿ , ರಾಧಾಕೃಷ್ಣ ವರ್ಮ, ಜಯರಾಮ ಪಡ್ರೆ, ವಿಶ್ವನಾಥ ಮಿತ್ತೂರು ,ವಿಂಧ್ಯಾ ಎಸ್.ರೈ ಮತ್ತಿತರರ ಕವನ, ನೃತ್ಯ ಪ್ರದರ್ಶನ, ಚಿತ್ರ ಬಿಡಿಸುವ ಕಾರ್ಯಕ್ರಮ ಮೂಡಿಬಂತು.

ಸಾಹಿತ್ಯ ಗೋಷ್ಠಿ
500 ರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಸ್ವರಚಿತ ಕಥೆ, ಕವನ , ಚುಟುಕು ಬರೆಯುವ,ವಾಚನ , ಆಶು ಮಾತುಕತೆ ಮತ್ತು ಸಾಹಿತ್ಯ ಗೋಷ್ಠಿಯಲ್ಲಿ ಭಾಗವಹಿಸಿದರು.

ಸಾಹಿತ್ಯ ತಾರೆ ಪ್ರಶಸ್ತಿ
ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರು ಶಾಲೆಯ ವಿದ್ಯಾರ್ಥಿಗಳ ವಾರ್ಷಿಕ ಸಾಹಿತ್ಯ ಚಟುವಟಿಕೆಗಳನ್ನು ಗಮನಿಸಿ ಸಾಹಿತ್ಯ ತಾರೆ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಲಾಯಿತು. ಕಲಾವಿದ ರಾಜೇಶ ವಿಟ್ಲರಿಗೆ ಬಾಲಬಂಧು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪುಸ್ತಕ ಸ್ಮರಣಿಕೆ,ಸ್ಪೂರ್ತಿ ಪತ್ರಗಳ ವಿರತಣೆ ಮಾಡಿ ಅಭಿನಂದಿಸಲಾಯಿತು.ಸಮ್ಮೇಳನಕ್ಕೆ ಸಹಕಾರ ನೀಡಿದ ಮಹನೀಯರನ್ನು ಗುರುತಿಸಿ ಕೃತಜ್ಞತೆ ಸಲ್ಲಿಸಲಾಯಿತು.

ಕಡೇಶಿವಾಲಯ ಶಾಲೆಯ ದೈಹಿಕ ಶಿಕ್ಷಕ ಭಾಸ್ಕರ ನಾಯ್ಕ,ಶಿಕ್ಷಕ ಪೀರಾಜ್ ವಾಬಳೆ, ಅಧ್ಯಾಪಕಿ ಪ್ರೇಮಾ ಕಡೇಶಿವಾಲಯ, ವಸಂತಿ ಎಲ್ .ಕಡೇಶಿವಾಲಯ, ಇಸ್ಮಾಯಿಲ್ ಅಳಿಕೆಮಜಲು, ಸಂಜೀವ ಎನ್. ಮಿತ್ತೂರು ಗೋಪಾಲಕೃಷ್ಣ ನೇರಳಕಟ್ಟೆ ನಾರ್ಶ ಮೈದಾನ, ತುಳಸಿ ಎಸ್. ಬಿಳಿಯೂರು, ಯಜ್ಞೇಶ್ವರಿ ಎನ್. ಮಾಣಿ, ಮುಹಮ್ಮದ್ ಸಾಬಿತ್ ಸುರಿಬೈಲು, ಸಾವಿತ್ರಿ ಸತ್ತಿಕಲ್ಲು, ಶ್ರೀಪತಿ ನಾಯಕ್ ನಾಟೆಕಲ್ಲು, ಎಂ.ಕೆ. ನಾಯ್ಡ್ ಮರಕ್ಕಿಣಿ ಪೆರುವಾಯಿ ಕಾರ್ಯಕ್ರಮದ ವ್ಯವಸ್ಥೆಗಳಲ್ಲಿ ಪ್ರಮುಖ ಪಾತ್ರ ವಹಿಸಿದರು.

ಪ್ರಥಮ ಕೆ. ಮಾಣಿ, ಆರಾಧ್ಯ ರೈ ಕೆ. ಕಡೇಶಿವಾಲಯ, ಶಿರ್ಷಿಕಾ ಆರ್ .ಬರಿಮಾರು, ಅನನ್ಯ ವಿ. ವಿಟ್ಲ, ವೈಭವ್ ಎನ್. ಕೆದಿಲ, ಯತಿನ್ ಸತ್ತಿಕಲ್ಲು, ಲಿಖಿತಾ ಅನಂತಾಡಿ, ಅಮೃತಾ ಕುಲಾಲ್ ಪೆರಾಜೆ, ವೈಷ್ಣವಿ ಎನ್. ಬಿಳಿಯೂರು, ಕೌಶೀಲ ನಾರ್ಶಮೈದಾನ, ಅಕ್ಷರ ಶ್ಯಾಮ ವಿಟ್ಲ, ಶಶಾಂಕ್ ಬಂಟ್ರಿಂಜ, ಗ್ಲೆನಿಶಾ ಶರ್ಲಾ ವಾಸ್ ನರಿಕೊಂಬು, ಮಾನಸ ಕಡೇಶಿವಾಲಯ, ಧನ್ವಿತಾ ವೀರಕಂಭ, ಸ್ಪೂರ್ತಿ ಕಲ್ಲಡ್ಕ, ಕಾರ್ತಿಕೇಯ ಆರ್. ಮಯ್ಯ ಮಂಗಳೂರು, ನಿರೀಕ್ಷಾ ಕೆ. ಚಂದಳಿಕೆ ,ಶಿಕ್ಷಕ ಜಯರಾಮ ಡಿ , ವಿದ್ಯಾರ್ಥಿಗಳಾದ ಹರ್ಷನ್ ಕುಲಾಲ್ ಶೇರಾ, ಪ್ರಖ್ಯಾತ್ ರಾವ್ ಕಡೇಶಿವಾಲಯ, ಧೃತಿ ಏಮಾಜೆ,ಮಾಣಿ ಬಾಲವಿಕಾಸದ ಸ್ವಸ್ತಿ , ಅಳಿಕೆಯ ಧನ್ವಿತಾ ಮಾಣಿ ಬಾಲವಿಕಾಸದ ಸ್ವಸ್ತಿ , ಅಳಿಕೆಯ ಧನ್ವಿತಾ ಕಾರಂತ್,ಮಾಣಿ ಪ್ರಾಥಮಿಕ ಶಾಲೆಯ ಪ್ರಥಮ ಕೆ,ಕಡೇಶಿವಾಲಯದ ಚಿನ್ಮಯಿ ಸ್ಫೂರ್ತಿ, ತನ್ವಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಯಶಸ್ವಿಗೊಂಡ ಸಮ್ಮೇಳನ
ಕಡೇಶಿವಾಲಯದಲ್ಲಿ ನಡೆದ ಮಕ್ಕಳ ಸಾಹಿತ್ಯ ಸಮ್ಮೇಳನವು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಡಿಮೆ ಇಲ್ಲದಂತೆ ಅದ್ಧೂರಿಯಿಂದ ಜರಗಿತು. ವೈಭವ ಪೂರ್ಣವಾದ ಮೆರವಣಿಗೆ , ಮಕ್ಕಳ ಶಿಸ್ತು , ಅಧ್ಯಾಪಕರ ಕ್ರಿಯಾಶೀಲತೆ , ಸ್ವಾಗತ ಸಮಿತಿಯ ಸಹಕಾರ , ಊರವರ ಪಾಲ್ಗೊಳ್ಳುವಿಕೆ , ಹೆತ್ತವರ ಪ್ರೋತ್ಸಾಹ ,ದಾನಿಗಳ ಕೈ ಜೋಡಿಸುವಿಕೆಯಿಂದ ಸಮ್ಮೇಳನ ಸಂಪನ್ನಗೊಂಡಿತು. 1500ಕ್ಕೂ ಹೆಚ್ಚು ಮಂದಿ ಭಾಗವಹಿಸಿ, ಮಕ್ಕಳ ಲೋಕದ ಅಧ್ಯಕ್ಷ ರಮೇಶ ಬಾಯಾರು,ಭಾಸ್ಕರ ಅಡ್ವಾಳ ಮಾರ್ಗದರ್ಶನದಲ್ಲಿ ಪದಾಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸಮಾವೇಶವು ಯಶಸ್ವಿಯಾಗಿದೆ ಎಂದು ಕಡೇಶಿವಾಲಯ ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ಹೇಳಿದರು.

LEAVE A REPLY

Please enter your comment!
Please enter your name here