ಪುತ್ತೂರು: ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ನ ಸಮಾಲೋಚನಾ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಡಿ.9ರಂದು ನೆಹರುನಗರದ ಸುದಾನ ವಸತಿಯುತ ಶಾಲಾ ಎಡ್ವರ್ಡ್ ಹಾಲ್ನಲ್ಲಿ ನಡೆಯಿತು.
ಅಸೋಸಿಯೇಶನ್ನ ಗೌರವಾಧ್ಯಕ್ಷ ವಿಜಯ ಹಾರ್ವಿನ್ ಮಾತನಾಡಿ, ದಾನ, ಧರ್ಮ ಮಾಡುವುದು, ಧಾರ್ಮಿಕ ಕೇಂದ್ರಗಳಿಗೆ ಹೋಗುವುದು ಮಾತ್ರವೇ ಭಗವಂತನ ಸೇವೆಯಲ್ಲ. ಮಕ್ಕಳಲ್ಲಿರುವ ಪ್ರತಿಭೆಗಳಿಗೆ ತಕ್ಕಂತೆ ಪ್ರೋತ್ಸಾಹ, ಸಹಕಾರ, ತರಬೇತಿ ನೀಡುವುದು ಭಗವಂತನ ಸೇವೆಯೇ ಆಗಿದೆ. ವಾಲಿಬಾಲ್ ಕ್ರೀಡೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯವ ನಿಟ್ಟಿನಲ್ಲಿ ಮಕ್ಕಳಿಗೆ ತರಬೇತಿ, ಉತ್ತೇಜನ ನೀಡಬೇಕಾದ ಅನಿವಾರ್ಯತೆಯಿದೆ. ನಾವು ಆಡಿ ಬೆಳೆದ ಕ್ರೀಡೆಯನ್ನು ಉಳಿಸಲು ಮಕ್ಕಳಿಗೆ ಪ್ರೋತ್ಸಾಹಿಸಬೇಕು. ಇದಕ್ಕೆ ಸುದಾನ ಕ್ಯಾಂಪಸ್ನಲ್ಲಿ ಅವಕಾಶ ನೀಡಲಾಗುವುದು ಎಂದರು.
ಸಭೆಯಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿ ಶಂಕರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿವರಾಮ ಭಟ್ ಬೀರ್ನಕಜೆ ವಂದಿಸಿದರು.