ರಾಷ್ಟ್ರೀಯ ಲೋಕ್ ಅದಾಲತ್ – ದ.ಕ.ಜಿಲ್ಲೆಯಲ್ಲಿ 13,618 ಪ್ರಕರಣಗಳು ಇತ್ಯರ್ಥ – ರೂ.16,94,65,274 ಪರಿಹಾರ ವಸೂಲು

0

ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದ.ಕ. ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ದ.9ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ದ.ಕ.ಜಿಲ್ಲೆಯಲ್ಲಿ 13,618 ಪ್ರಕರಣಗಳು ಇತ್ಯರ್ಥಗೊಂಡಿದ್ದು ಒಟ್ಟು 16,94,65,274 ರೂ.ಪರಿಹಾರ ವಸೂಲು ಮಾಡಲಾಗಿದೆ.
ಜಿಲ್ಲೆಯಲ್ಲಿ ನಡೆದ 47 ಬೈಠಕ್‌ಗಳಲ್ಲಿ 22,135 ಪ್ರಕರಣಗಳನ್ನು ಪರಿಗಣಿಸಲಾಗಿತ್ತು.ಅದರಲ್ಲಿ 13,618 ಪ್ರಕರಣಗಳು ರಾಜಿಯಲ್ಲಿ ಮುಕ್ತಾಯ ಕಂಡಿದ್ದು ರಾಜಿ ಮೊತ್ತ ರೂ.16,94,65,274 ಗಳನ್ನು ಪರಿಹಾರ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧಿಶೆ ಶೋಭಾ ಬಿ.ಜಿ. ತಿಳಿಸಿದ್ದಾರೆ.
ಈ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ ಮತ್ತು ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಹಾಗೂ ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್‌ಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಮತ್ತು ಆಸ್ತಿ ವಿಭಾಗದ ಪ್ರಕರಣಗಳ ಸಹಿತ ರಾಜಿಯಾಗಬಹುದಾದ ಪ್ರಕರಣಗಳನ್ನು ಯಾವುದೇ ಶುಲ್ಕವಿಲ್ಲದೆ ಇತ್ಯರ್ಥಪಡಿಸಲಾಯಿತು.

LEAVE A REPLY

Please enter your comment!
Please enter your name here