ಡಿ.12: ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ

0

ಪುತ್ತೂರು: ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನ ಕೇಂದ್ರ, ಐಕ್ಯೂಎಸಿ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ದೇರಾಜೆ ಸೀತಾರಾಮಯ್ಯ ಸಂಸ್ಕರಣ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು
(ಸಂಸ್ಕರಣ ಗ್ರಂಥ) ಮತ್ತು ರಸಋಷಿ (ಮರುಮುದ್ರಣ) ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಡಿ.12ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಮುಂಜಾನೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಮೊದಲ ಅವಧಿಯಲ್ಲಿ ಕೃತಿಗಳ ಲೋಕಾರ್ಪಣೆ ನಡೆಯಲಿದ್ದು, ಇದನ್ನು ಚಿಂತಕ ಲಕ್ಷ್ಮೀಶ ತೋಲ್ಪಾಡಿ ನಡೆಸಲಿದ್ದಾರೆ. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ಮತ್ತು ಅರ್ಥದಾರಿ ಗಣರಾಜ ಕುಂಬ್ಳೆ ಸೇರಿದಂತೆ ಹಲವು ಗಣ್ಯರು ಈ
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರದ ಅವಧಿಯಲ್ಲಿ ದೇರಾಜೆ ಅರ್ಥ ವೈಭವ ಸ್ಮರಣೆ ಎಂಬ ಕಾರ್ಯಕ್ರಮವನ್ನು ಲಕ್ಷ್ಮೀಶ ತೋಲ್ಪಾಡಿ
ನಡೆಸಿಕೊಡಲಿದ್ದಾರೆ. ಮದ್ಯಾಹ್ನ ನಂತರದ ಅವಧಿಯಲ್ಲಿ “ಅಗ್ನಿಪರೀಕ್ಷೆ – ಶ್ರೀರಾಮ ಪಟ್ಟಾಭಿಷೇಕ” ತಾಳಮದ್ದಳೆ ಕಾರ್ಯಕ್ರಮ ಜರಗಲಿದೆ. ದಿನೇಶ್ ಅಮ್ಮಣ್ಣಾಯ ಭಾಗವತಿಕೆಯನ್ನು ಮಾಡಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here