ಮಂಗಳೂರು ಲೋಕಾಯುಕ್ತ ಡಿವೈಎಸ್ಪಿಯಾಗಿ ಡಾ. ಗಾನಾ ಪಿ.‌ ಕುಮಾರ್ ಕರ್ತವ್ಯಕ್ಕೆ ಹಾಜರು

0

ಪುತ್ತೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿಯಾಗಿ ಡಾ.‌ಗಾನಾ ಪಿ.ಕುಮಾರ್ ಅವರು‌ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪುತ್ತೂರು ಉಪವಿಭಾಗದ ಪೊಲೀಸ್ ಡಿವೈಎಸ್ಪಿಯಾಗಿ ಮತ್ತು ಮಂಗಳೂರಿನಲ್ಲಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಡಿ.ಸಿ.ಆರ್.ಬಿ.‌ವಿಭಾಗದ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ.‌ಗಾನಾ ಪಿ.ಕುಮಾರ್ ಅವರು ಕೆಲವು ದಿನಗಳ ಹಿಂದೆ ಲೋಕಾಯುಕ್ತ ಡಿವೈಎಸ್ಪಿಯಾಗಿ ವರ್ಗಾವಣೆಗೊಂಡಿದ್ದರು.‌ ಇದೀಗ ಅವರು ಮಂಗಳೂರು ವಿಭಾಗ ಲೋಕಾಯುಕ್ತ ಡಿವೈಎಸ್ಪಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.‌

LEAVE A REPLY

Please enter your comment!
Please enter your name here