ಅವನಿ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಭಾರತ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯ ನಡೆಸಿದ ಕಲೋತ್ಸವ 2023 -24ರ ಜಿಲ್ಲಾ ಮಟ್ಟದ ಸ್ಪರ್ಧೆಯ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ಅವನಿ ನಾಯಕ್ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಇವರು ಪುತ್ತೂರಿನ ಛಾಯಾಗ್ರಾಹಕ ವಿನಾಯಕ ನಾಯಕ್ ಮತ್ತು ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಧನಲಕ್ಷ್ಮಿ ಅವರ ಪುತ್ರಿ ಹಾಗೂ ಕೊಂಬೆಟ್ಟು ಸಾಧನಾ ಸಂಗೀತ ವಿದ್ಯಾಲಯದ ವಿದುಷಿ ಡಾ. ಸುಚಿತ್ರಾ ಹೊಳ್ಳರವರ ಶಿಷ್ಯೆ.

LEAVE A REPLY

Please enter your comment!
Please enter your name here