ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

0

ಅಧ್ಯಕ್ಷ: ಹೃತಿಕ್‌ ರಾಜ್ ಕಾರ್ಯದರ್ಶಿ: ಮಾಳವಿಕ ಎಚ್.ವಿ.,ಜೊತೆ ಕಾರ್ಯದರ್ಶಿ: ಅರ್ಪಿತಾ ಪ್ರಶಾಂತ್

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಪರಿಷತ್ ನ ಪದಾಧಿಕಾರಿಗಳ ವಿವಿಧ ಹುದ್ದೆಗಳಿಗೆ ಕಾಲೇಜು ಹಂತದ ಚುನಾವಣೆಯು ನಡೆಯಿತು.

ಪರಿಷತ್ ನ ವಿದ್ಯಾರ್ಥಿ ನಾಯಕನ ಹುದ್ದೆಗೆ ಒಟ್ಟು ಮೂರು ವಿದ್ಯಾರ್ಥಿಗಳು ಸ್ಪರ್ಧಿಸಿದ್ದು, 5th ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿ ಹೃತಿಕ್ ರಾಜ್ ನಾಯಕನಾಗಿ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, 5th ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿನಿ ಮಾಳವಿಕ ಎಚ್. ವಿ. ಆಯ್ಕೆಯಾಗಿದ್ದಾರೆ. ಅದೇ ರೀತಿ ಜೊತೆ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಸ್ಪರ್ದಿಸಿದ್ದು, 5th ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿನಿ ಅರ್ಪಿತಾ ಪ್ರಶಾಂತ್ ಆಯ್ಕೆಯಾಗಿದ್ದಾರೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಶ್ರೀಮತಿ ಸುಭಾಷಿನಿ ಜೆ ಹಾಗೂ ಕು. ಶ್ರೀರಕ್ಷಾ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದ್ದಾರೆ.

LEAVE A REPLY

Please enter your comment!
Please enter your name here