ಶ್ರೀನಿವಾಸ ಕಲ್ಯಾಣೋತ್ಸವ ಸವಣೂರು ಸಮಿತಿ ಗೌರವಾಧ್ಯಕ್ಷ ವೆಂಕಟೇಶ್ ಭಟ್, ಅಧ್ಯಕ್ಷ ದೇವಿಪ್ರಸಾದ್

0

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಪುತ್ತಿಲ ಪರಿವಾರ ಪುತ್ತೂರು ಇದರ ಆಶ್ರಯದಲ್ಲಿ ಡಿ.24 ಮತ್ತು 25ರಂದು ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮ ಪುತ್ತೂರು ಮಹಾಲಿಂಗೇಶ್ವರ ದೇವರ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಇದರ ಹಿನ್ನೆಯಲ್ಲಿ ಸವಣೂರು ಸಮಿತಿಯನ್ನು ರಚಿಸಲಾಗಿದೆ. ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ. ಸಂಚಾಲಕ ರವಿಕುಮಾರ್ ರೈ ಕೆದಂಬಾಡಿ ಮಠ,ಸಮಿತಿಯ ಪದಾಧಿಕಾರಿಗಳಾದ ನವೀನ್ ರೈ, ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಉಪಸ್ಥಿತರಿದ್ದು ಶ್ರೀನಿವಾಸ ಕಲ್ಯಾಣೋತ್ಸವ ಸವಣೂರು ವಲಯದ ಸಮಿತಿಯನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ವೆಂಕಟೇಶ್ ಭಟ್ ಕೊಯಿಕುಡೆ, ಸಂಚಾಲಕರಾಗಿ ಪುಷ್ಪರಾಜ ಆರೇಲ್ತಡಿ, ಅಧ್ಯಕ್ಷರಾಗಿ ದೇವಿಪ್ರಸಾದ್ ಪಂಚೋಡಿ, ಪ್ರಧಾನ ಕಾರ್ಯದರ್ಶಿ: ಕೌಶಿಕ್ ಶಾಂತಿನಗರ, ಕಾರ್ಯದರ್ಶಿಗಳಾಗಿ ಶ್ರೀಧರ ಸುಣ್ಣಾಜೆ, ಮೋಕ್ಷಿತ್ ಇಡ್ಯಾಡಿ, ದಿಲೀಪ್ ಹೆಗ್ಡೆ, ಪ್ರಖ್ಯಾತ್ ಪಂಚೋಡಿ, ಚೇತನ್ ಇಡ್ಯಾಡಿ, ಪ್ರಶಾಂತ್ ನೂಜಾಜೆ, ಮಿಥುನ್ ಅಗರಿ, ದಯಾನಂದ, ಸುರೇಶ್ ಬಂಬಿಲ, ಮನು ಸವಣೂರು, ರಾಮಚಂದ್ರ ಕುಮಾರಮಂಗಲ, ಉಪಾಧ್ಯಕ್ಷರುಗಳಾಗಿ ಹರಿಪ್ರಸಾದ್ ಅಂಗಡಿಮೂಲೆ, ಪ್ರಕಾಶ್ ನೂಜಾಜೆ, ಗಂಗಾಧರ ಇಡ್ಯಾಡಿ, ಕರುಣಾಕರ ಸಾರಕೆರೆ ಹಾಗೂ ಸದಸ್ಯರುಗಳ ಸಮಿತಿಯನ್ನು ರಚಿಸಲಾಯಿತು.

LEAVE A REPLY

Please enter your comment!
Please enter your name here