ಚೆನ್ನಾವರ : ಕ.ಸಾ.ಪ.ಕಡಬ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಜಾಗೃತಿ ಕಾರ್ಯಕ್ರಮ

0

ಸವಣೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ,ಕಡಬ ತಾಲೂಕು ಘಟಕ ಮತ್ತು ಚೆನ್ನಾವರ ಸ.ಕಿ.ಪ್ರಾ.ಶಾಲೆಯಲ್ಲಿ ಸಾಹಿತ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್. ಅವರು ಉದ್ಘಾಟಿಸಿದರು. ಕಡಬ ತಾಲೂಕು ಕ.ಸಾ.ಪ.ಅಧ್ಯಕ್ಷ ಕೆ. ಸೇಸಪ್ಪ ರೈ ಅವರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಸವಣೂರು ಗ್ರಾ.ಪಂ.ಸದಸ್ಯೆ ವಿನೋದಾ ರೈ ,ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸಂದೇಶ್ ,ಕೆಯ್ಯೂರು ಸಿಆರ್‌ಪಿ ಶಶಿಕಲಾ,ಪ್ರಗತಿಪರ ಕೃಷಿಕ ಬಾಲಕೃಷ್ಣ ರೈ ಚೆನ್ನಾವರ, ಕ.ಸಾ.ಪ.ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುರಂದರ ಕೆ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸದಸ್ಯ ಶೆರೀಫ್ ಕುಂಡಡ್ಕ ,ಸವಣೂರು ಗ್ರಾ.ಪಂ.ಸಿಬಂದಿ ದಯಾನಂದ ಮಾಲೆತ್ತಾರು, ಕ.ಸಾ.ಪ.ಕಡಬ ತಾಲೂಕಿನ ಸಂಘಟನಾ ಕಾರ್ಯದರ್ಶಿ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರು ಮಲ್ಲೇಶಯ್ಯ ಎಚ್.ಎಂ. ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಅಫೀಫಾ ಬಹುಮಾನಿತರ ಪಟ್ಟಿ ವಾಚಿಸಿದರು.

LEAVE A REPLY

Please enter your comment!
Please enter your name here