2ನೇ ದಿನಕ್ಕೆ ಕಾಲಿಟ್ಟ ಗ್ರಾಮೀಣ ಅಂಚೆ ಸೇವಕರ ಅನಿರ್ಧಿಷ್ಟಾವಧಿ ಮುಷ್ಕರ

0

ಪುತ್ತೂರು: ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿಯಿಂದ ಪುತ್ತೂರು ಪ್ರಧಾನ ಅಂಚೆ ಕಚೇರಿ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ.


ಸುಳ್ಯ, ಪುತ್ತೂರು, ಕಾರ್ಕಳ, ಬಂಟ್ವಾಳ ತಾಲೂಕು ಒಳಗೊಂಡ ಪುತ್ತೂರು ವಿಭಾಗೀಯ ಮಟ್ಟದ ಗ್ರಾಮೀಣ ಅಂಚೆ ಸೇವಕರು ಪ್ರತಿಭಟನೆಯಲ್ಲಿ ಪಾಲೊಂಡಿದ್ದು, ಆಲ್ ಇಂಡಿಯ ಗ್ರಾಮೀಣ ಡಾಕ್ ಸೇವಕ್ ಯೂನಿಯನ್ ಪುತ್ತೂರು ಇದರ ಕಾರ್ಯದರ್ಶಿ ಸುನಿಲ್ ದೇವಾಡಿಗ, ಯೂನಿಯನ್‌ನ ಅಧ್ಯಕ್ಷ ವಿಠಲ ಎಸ್. ಪೂಜಾರಿ, ಕೋಶಾಧಿಕಾರಿ ಕಮಲಾಕ್ಷ ಹಾಗೂ ಪದಾಧಿಕಾರಿಗಳು, ಸದಸ್ಯರು, ನೌಕರರು ಭಾಗವಹಿಸಿದ್ದು ಬೇಡಿಕೆ ಈಡೇರಿಕೆ ತನಕ ನಮ್ಮ ಮುಷ್ಕರ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here