ನಿಡ್ಪಳ್ಳಿ ದೇವಾಲಯಕ್ಕೆ ಅಯೋಧ್ಯೆಯ ಮಂತ್ರಾಕ್ಷತೆ ಆಗಮನ

0

ನಿಡ್ಪಳ್ಳಿ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಮೆರವಣಿಗೆಯೊಂದಿಗೆ ಡಿ.14 ರಂದು ಆಗಮನವಾಯಿತು

ಈಶ್ವರಮಂಗಲ ಹನುಮಗಿರಿಯಲ್ಲಿ ವಿತರಿಸಿದ ಮಂತ್ರಾಕ್ಷತೆಯನ್ನು ವಾಹನದಲ್ಲಿ ಮೆರವಣಿಗೆ ಮೂಲಕ ತಂದು ನಿಡ್ಪಳ್ಳಿ ಉಳ್ಳಾಕುಲು ದೈವಸ್ಥಾನದ ಬಳಿಯಿಂದ ಭಜನೆ ಶಂಖ ಜಾಗಟೆಯೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ನಂತರ ದೇವಸ್ಥಾನದ ಅರ್ಚಕ ನವೀನ್ ಹೆಬ್ಬಾರ್ ಪೂಜೆ ನೆರವೇರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ, ಉಪಾಧ್ಯಕ್ಷ ಪದ್ಮನಾಭ ಬೋರ್ಕರ್, ಸದಸ್ಯರಾದ ಗೋಪಾಲಕೃಷ್ಣ ಭಟ್, ನಾಗೇಶ ಗೌಡ, ತಿಮ್ಮಣ್ಣ ರೈ, ರಾಮಚಂದ್ರ ಮಣಿಯಾಣಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಸೇರಿದಂತೆ ಗ್ರಾಮದ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here