ನಗರಸಭೆ ಉಪಚುನಾವಣೆ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಘೋಷಣೆ-ಡಿ.15ಕ್ಕೆ ನಾಮಪತ್ರ ಸಲ್ಲಿಕೆ

0

ಪುತ್ತೂರು: ಪುತ್ತೂರು ನಗರಸಭೆ ಎರಡು ವಾರ್ಡ್‌ಗಳ ಉಪಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್‌ನಿಂದ ಕಣಕ್ಕಿಳಿಸುವ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ.
ನಗರಸಭೆ ವಾರ್ಡ್ ಸಂಖ್ಯೆ 1ಕ್ಕೆ ದಿನೇಶ್ ಕೆ. ಶೇವಿರೆ ಮತ್ತು ವಾರ್ಡ್ ಸಂಖ್ಯೆ 11ರಲ್ಲಿ ದಾಮೋದರ್ ಭಂಡಾರ್ಕರ್ ಅವರನ್ನು ಕಣಕ್ಕಿಳಿಸುವ ಕುರಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ಅವರು ಘೋಷಣೆ ಮಾಡಿದ್ದಾರೆ. ಪಕ್ಷದ ತಳಮಟ್ಟದ ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈವರಲ್ಲಿ ಹಾಗೂ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಈ ಆಯ್ಕೆ ನಡೆದಿರುತ್ತದೆ ಎಂದು ಹೆಚ್. ಮಹಮ್ಮದ್ ಆಲಿ ಅವರು ತಿಳಿಸಿದ್ದಾರೆ.

ಡಿ.15ಕ್ಕೆ ನಾಮಪತ್ರ ಸಲ್ಲಿಕೆ
ಡಿ.15ಕ್ಕೆ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ ಗಂಟೆ 10ಕ್ಕೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಸೇರಿ ಬಳಿಕ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here