ಡಿ.17: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ವಾರ್ಷಿಕೋತ್ಸವ – ಶಾಲಾ ಕೊಠಡಿ, ನೂತನ ಗ್ರಂಥಾಲಯ ಉದ್ಘಾಟನೆ – ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಷಷ್ಠ್ಯಬ್ದ ಪ್ರಯುಕ್ತ ಗೋಸಂರಕ್ಷಣಾ ನಿಧಿ ಸಮರ್ಪಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವೃತ್ತಿಪರ ಶಿಕ್ಷಣ ಅಭಿವೃದ್ಧಿ ಕೇಂದ್ರ, ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಶ್ರೀ ರಾಮಕುಂಜೇಶ್ವರ ವಸತಿ ನಿಲಯ, ರಾಮಕುಂಜ ಇದರ ವಾರ್ಷಿಕೋತ್ಸವ, ಶಾಲಾ ಕೊಠಡಿ, ನೂತನ ಗ್ರಂಥಾಲಯ ಉದ್ಘಾಟನೆ ಹಾಗೂ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಷಷ್ಠ್ಯಬ್ದ ಪ್ರಯುಕ್ತ ಗೋ ಸಂರಕ್ಷಣಾ ನಿಧಿ ಸಮರ್ಪಣೆ ಕಾರ್ಯಕ್ರಮ ಡಿ.17ರಂದು ಬೆಳಿಗ್ಗೆ 10ಕ್ಕೆ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ವಿವೇಕಾನಂದ ಪದವಿಕಾಲೇಜು ಸ್ವಯತ್ತ ಇಲ್ಲಿನ ಪರೀಕ್ಷಾಂಗ ಕುಲಸಚಿವರಾದ ಡಾ| ಹೆಚ್.ಜಿ.ಶ್ರೀಧರ್, ಕಾಣಿಯೂರು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಮೈಸೂರು ಮತ್ತು ಮಂಗಳೂರಿನ ಎಸ್‌ಎಲ್‌ವಿ ಸಂಸ್ಥೆಯ ದಿವಾಕರ ದಾಸ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ತೀರ್ಥೇಶ್ ಶೆಟ್ಟಿ ಅವರಿಗೆ ಸನ್ಮಾನ ನಡೆಯಲಿದೆ ಎಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here