ಡಿ. 16: ಬಡಗನ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೇನು ಕೃಷಿ ಮಾಹಿತಿ ಕಾರ್ಯಕ್ರಮ

0

ಪುತ್ತೂರು:ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, (ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ) ಮತ್ತು ಗ್ರಾಮಾಭಿವೃದ್ಧಿ ಸಮಿತಿ, ಮಂಗಳೂರು ವಿಜಯ ಗ್ರಾಮೀಣ ಪ್ರತಿಷ್ಠಾನ,ಬಡಗನ್ನೂರು ಘಟಕ ಇವುಗಳ ಸಹಯೋಗದೊಂದಿಗೆ ಜೇನು ಕೃಷಿ ಮಾಹಿತಿ ಕಾರ್ಯಕ್ರಮ ಡಿ. 16 ರಂದು ಬೆಳಗ್ಗೆ ಗಂಟೆ 9-30ಕ್ಕೆ ಬಡಗನ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು  ಬಡಗನ್ನೂರು ಗ್ರಾಮ ಪಂಚಾಯತ್  ಅಧ್ಯಕ್ಷೆ  ಪುಷ್ಪಲತಾ ಎಂ ಉದ್ಘಾಟಿಸಲಿದ್ದಾರೆ.ಸಭಾಧ್ಯಕ್ಷತೆಯನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಬಡಗನ್ನೂರು  ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಕೃಷ್ಣ ಭಟ್ ಸಿ.ಯಚ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ಆರ್.ಡಿ.ಎಫ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಹೆಗ್ಡೆ, ಬ್ಯಾಂಕ್ ಆಫ್ ಬರೋಡ ಕುಂಬ್ರ ಶಾಖೆ  ಹಿರಿಯ ಶಾಖಾ ಪ್ರಬಂಧಕ ಜಕ್ಕುಲ ರಾಜಾ, ಪ್ರಗತಿಪರ ಕೃಷಿಕ ಶ್ರೀನಿವಾಸ್ ಭಟ್ ಚಂದು ಕೂಡ್ಲು ‌ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಜೇನು ವ್ಯವಸಾಯಗಾರರ ಸಂಘದ ನಿರ್ದೇಶಕ  ಮನಮೋಹನ ಆರಂಬ್ಯ ಇರ್ದೆ ಜೇನು ಕೃಷಿ ಬಗ್ಗೆ ಮಾಹಿತಿ ನೀಡಲ್ಲಿದ್ದಾರೆ.

LEAVE A REPLY

Please enter your comment!
Please enter your name here