ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ;ಐವರು ಆರೋಪಿಗಳ ಪತ್ತೆಗೆ ಮಾಹಿತಿ ಕೋರಿದ ಎನ್.ಐ.ಎ.

0

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮನವಿ ಮಾಡಿದೆ.

ಬೆಳ್ಳಾರೆಯ ಬೂಡು ನಿವಾಸಿ ಎಂ.ಡಿ.ಮುಸ್ತಫ, ನೆಕ್ಕಿಲಾಡಿ ಅಗ್ನಾಡಿ ನಿವಾಸಿ ಮಸೂದ್‌ ಅಗ್ನಾಡಿ, ಮಸೂದ್‌ ಕೆ.ಎ, ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್‌ ಶರೀಫ್‌ ಕೊಡಾಜೆ, ಸುಳ್ಯದ ಕಲ್ಲುಮುಟ್ಟು ನಿವಾಸಿ ಉಮ್ಮರ್‌ ಆರ್. ಉಮ್ಮರ್‌ ಫಾರೂಕ್‌, ಬೆಳ್ಳಾರೆ ನಿವಾಸಿ ಅಬೂಬಕ್ಕರ್‌ ಸಿದ್ದಿಕ್‌ ರಾಷ್ಟ್ರೀಯ ತನಿಖಾ ತಂಡದ ವಾಂಟೆಡ್‌ ಲಿಸ್ಟ್‌ ನಲ್ಲಿದ್ದಾರೆ.

ಈ ಆರೋಪಿಗಳ ಕುರಿತು ಇರುವಿಕೆ ತಿಳಿದು ಬಂದರೆ ಮಾಹಿತಿ (whatsapp 9497715294) ತಿಳಿದು ಬಂದಲ್ಲಿ ತಿಳಿಸಬೇಕೆಂದು ಸಾರ್ವಜನಿಕರನ್ನು ಎನ್‌ಐಎ ವಿನಂತಿಸಿದೆ. ಅಷ್ಟು ಮಾತ್ರವಲ್ಲದೇ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡುವುದಾಗಿಯೂ ಘೋಷಣೆ ಮಾಡಿದೆ

LEAVE A REPLY

Please enter your comment!
Please enter your name here