ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅಯೋಧ್ಯೆಯ ಮಂತ್ರಾಕ್ಷತೆ

0

ಈಶ್ವರಮಂಗಲ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯು ದ.14 ರಂದು ಶ್ರೀ ಕ್ಷೇತ್ರ ಹನುಮಗಿರಿಯ ಕೋದಂಡರಾಮನ ಸನ್ನಿಧಿಯಲ್ಲಿ ಸುಬ್ರಹ್ಮಣ್ಯ ಶ್ರೀಗಳು ವಿತರಿಸಿದರು. ಅಕ್ಷತೆಯನ್ನು ಹನುಮಗಿರಿಯಿಂದ ಈಶ್ವರಮಂಗಲಕ್ಕೆ ಪಲ್ಲಕಿಯಲ್ಲಿ ಕುಣಿತ ಭಜನೆಯೊಂದಿಗೆ ಮೆರವಣಿಗೆ ಮೂಲಕ ತರಲಾಯಿತು. ದೇವಳದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪವಿತ್ರಪಾಣಿ ಗೋಪಾಲ ಕೃಷ್ಣ ಕುಂಜತ್ತಾಯ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮಂಜುನಾಥ ರೈ ಸಾಂತ್ಯ, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here