ಬೈಕ್ ಮತ್ತು ಅಟೋ ರಿಕ್ಷಾ ನಡುವೆ ಢಿಕ್ಕಿ -ಈಜು ತಜ್ಞ ಮುಹಮ್ಮದ್‌ಗೆ ಗಾಯ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಂದಾರು ಎಂಬಲ್ಲಿ ಬೈಕ್ ಮತ್ತು ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮುಹಮ್ಮದ್ ಬಟ್ಲಡ್ಕ (63) ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.


ನುರಿತ ಈಜುಗಾರರಾಗಿರುವ ಮಹಮ್ಮದ್ ಬಟ್ಲಡ್ಕರವರು ತನ್ನ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಬಂದಾರು ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಅವರ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಅಪಘಾತದ ಸಂದರ್ಭ ಎರಡೂ ವಾಹನಗಳು ಮಗುಚಿ ಬಿದ್ದಿದ್ದು, ರಿಕ್ಷಾ ಚಾಲಕ ನೀಲಯ್ಯ ಎಂಬವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಗಾಯಗೊಂಡ ಮುಹಮ್ಮದ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here