ಕೂವೆತ್ತಿಲ: ಬಸ್ಸು-ಬೈಕ್‌ ಅಪಘಾತ-ಸವಾರ ಸ್ಥಳದಲ್ಲೇ ಮೃತ್ಯು

0

ವಿಟ್ಲ: ಬಸ್ಸು ಹಾಗೂ ಬೈಕ್‌ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಮಿತ್ತೂರು ಬಳಿಯ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಬಿಸಿರೋಡ್‌ ಕೈಕಂಬ ನಿವಾಸಿ ಆಶಿಕ್‌ (18) ಮೃತದುರ್ದೈವಿ ಬೈಕ್‌ ಸವಾರ. ಮಂಗಳೂರು ಭಾಗದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್‌ ಮಧ್ಯೆ ಕಬಕ ಸಮೀಪದ ಕೂವೆತ್ತಿಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ತೀವ್ರತೆಗೆ ಬೈಕ್‌ ಬಸ್ಸಿನ ಅಡಿಭಾಗಕ್ಕೆ ನುಗ್ಗಿದ್ದು, ಬಸ್ಸಿನಡಿ ಸಿಲುಕಿದ್ದ ಆಶಿಕ್‌ ರನ್ನು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದು ಆಂಬ್ಯುಲೆನ್ಸ್‌ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರಗೆ ಸಾಗಿಸಿದ್ದಾರೆ. ಈ ವೇಳೆಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಆಶಿಕ್‌ ರವರು ಬೈಕ್‌ ನಲ್ಲಿ ಒಬ್ಬರೇ ಇದ್ದರು. ಅಪಘಾತ ತಪ್ಪಿಸುವ ಭರದಲ್ಲಿ ಬಸ್ ಚಾಲಕ ಬಸ್ಸನ್ನು ರಸ್ತೆಯಿಂದ ಕೆಳಗಿಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತ ವೇಳೆ ಬಸ್ಸು ರಸ್ತೆ ಬಿಟ್ಟು ಕೆಳಗೆ ಇಳಿದ ಪರಿಣಾಮ ರಸ್ತೆ ಬದಿಯ ಮೈಲುಗಲ್ಲಿಗೆ ಬಸ್ಸಿನ ಇಂಜಿನ್‌ ಬಡಿದಿರುವುದರಿಂದ ರಸ್ತೆಯಲ್ಲಿ ಆಯಿಲ್‌ ಚೆಲ್ಲಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ಬಳಿಕ ಅಗ್ನಿಶಾಮಕ ದಳದವರನ್ನು ಕರೆಯಿಸಿ ರಸ್ತೆಯಲ್ಲಿ ಬಿದ್ದಿದ್ದ ಆಯಿಲ್‌ ಕ್ಲೀನ್‌ ಮಾಡಲಾಯಿತು. ಘಟನಾ ಸ್ಥಳಕ್ಕಾಗಮಿಸಿರುವ ವಿಟ್ಲ ಠಾಣಾ ಪೊಲೀಸರು ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here