ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣ ಅಗೇಲು ಸೇವೆ

0

ಬಡಗನ್ನೂರುಃ ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಡಿ.16 ರಂದು ಸಂಕ್ರಮಣ ಅಂಗವಾಗಿ ಅಗೇಲು ಸೇವೆ ನಡೆಯಿತು. ಪ್ರಾರಂಭದಲ್ಲಿ ಕ್ಷೇತ್ರದ ಪ್ರಧಾನ ಪೂಜಾ ಕರ್ಮಿ ಮಾದವ ಸಾಲಿಯಾನ್ ನೇತೃತ್ವದಲ್ಲಿ ಶ್ರೀ ಗುಳಿಗ ರಾಜನಿಗೆ ಮತ್ತು ಸಾರ್ಲಪಟ್ಟ ದೈವಸ್ವಾಮಿ ಕೊರಗಜ್ಜನಿಗೆ ಪ್ರಾರ್ಥನೆ ನಡೆಯಿತು. ಬಳಿಕ  ಶ್ರೀ ಗುಳಿಗ ದೈವಕ್ಕೆ ಕಳಸ ಸೇವೆ ಹಾಗೂ ಸ್ವಾಮಿ ಕೊರಗಜ್ಜನಿಗೆ ಅಗೇಲು ಸೇವೆ ನಡೆಯಿತು.

ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಭಕ್ತರು ಸುಮಾರು 96 ಅಗೇಲು ಸೇವೆ, ಮತ್ತು ನೂರಕ್ಕೂ ಹೆಚ್ಚು ಕಳಸ ಸೇವೆ ಸಲ್ಲಿಸಿ ತಮ್ಮ ತಮ್ಮ ಬೇಡಿಕೆಗಳು ಈಡೇರಿಸುವಂತೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಕಾರ್ಯದರ್ಶಿ ಪ್ರಕಾಶ್  ಮರದಮೂಲೆ, ಉಪಾಧ್ಯಕ್ಷ ಸದಾನಂದ ಬೋಳಂಕೂಡ್ಲು, ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here