ಶಿರಾಡಿ: ಬಸ್ಸು-ಕಾರು ಡಿಕ್ಕಿ, ನಾಲ್ವರಿಗೆ ಗಾಯ

0

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸಿನ ಹಿಂಭಾಗಕ್ಕೆ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಡಿ.17ರಂದು ಮುಂಜಾನೆ 5.30ರ ವೇಳೆಗೆ ನಡೆದಿದೆ.


ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹೇಶ್ (28), ಅಭಿಷೇಕ್ (30), ಮುತ್ತುರಾಜ್ (30) ಹಾಗೂ ನವೀನ್ (29)ಎಂಬವರು ಗಾಯಗೊಂಡಿದ್ದಾರೆ. ಇವರೆಲ್ಲರು ಬೆಂಗಳೂರಿನ ಬನಶಂಕರಿ ಲೇ ಔಟ್ ನಿವಾಸಿಗಳಾಗಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು 108 ಆಂಬುಲೆನ್ಸ್‌ನಲ್ಲಿ ಕರೆದೊಯ್ದು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here