ಇಚ್ಲಂಪಾಡಿ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ

0

ನೆಲ್ಯಾಡಿ: ಬೈಕ್ ಹಾಗೂ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕಡಬ ತಾಲೂಕು ಇಚ್ಲಂಪಾಡಿ
ಸೈಂಟ್ ಜಾರ್ಜ್ ಆರ್ಥೋಡಾಕ್ಸ್ ಚರ್ಚ್ ನ ಮುಂಭಾಗ ರಾಜ್ಯ ಹೆದ್ದಾರಿ ಯಲ್ಲಿ ಡಿ.18ರಂದು ಮಧ್ಯಾಹ್ನ ಸಂಭವಿಸಿದೆ.
ಬಲ್ಯ ಗ್ರಾಮದ ಕಂಚಿನಡ್ಕ ನಿವಾಸಿ, ಬೈಕ್ ಸವಾರ ಆನಂದ ಶೆಟ್ಟಿ (51ವ.)ಗಾಯಗೊಂಡವರು. ಇವರು ಇಚ್ಲಂಪಾಡಿ ನೇರ್ಲ ಪೇಟೆಯಿಂದ ಮನೆಗೆ ಹೋಗುತ್ತಿದ್ದಾಗ ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರಿನ ಮಧ್ಯೆ ಇಚ್ಲಂಪಾಡಿ ಸೈಂಟ್ ಜಾರ್ಜ್ ಆರ್ಥೋಡಾಕ್ಸ್ ಚರ್ಚ್ ನ ಮುಂಭಾಗ ರಾಜ್ಯ ಹೆದ್ದಾರಿಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಬೈಕ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ .

ಪರಾರಿಯಾದ ಕಾರು:
ಬೈಕ್ ಗೆ ಕಾರು ಡಿಕ್ಕಿಯಾದರೂ ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದರು. ಸ್ಥಳೀಯ ಯುವಕರು ಕಾರನ್ನು ಬೆನ್ನಟ್ಟಿ ಕಾರ್ಯತಡ್ಕ ಎಂಬಲ್ಲಿ ತಡೆದು ನಿಲ್ಲಿಸಿದ್ದಾರೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಆನಂದ ಶೆಟ್ಟಿ ಅವರು ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here