ಚಾರ್ವಾಕ: ಜಾತಿ ನಿಂದನೆ, ಹಲ್ಲೆ ಆರೋಪ- ಪ್ರಕರಣ ದಾಖಲು

0

ಕಾಣಿಯೂರು: ವ್ಯಕ್ತಿಯೋರ್ವರ ಮನೆಗೆ ಬಂದು ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಲಾಗಿದ್ದು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾರ್ವಾಕ ನಿವಾಸಿ ಮನೋಹರ್ ಎಂಬವರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಗಣೇಶ್ ಉದನಡ್ಕ, ರಾಧಾಕೃಷ್ಣ ಮುದುವ, ಅಖಿಲ್ ಬೋಮ್ಮೊಳಿಕೆ, ಉಮೇಶ್ ಬಿರೋಳಿಕೆ, ಯಶೋಧರ ಬಿರೋಳಿಕೆ ವಿರುದ್ಧ ಪ್ರಕರಣ ಪ್ರಕರಣ ದಾಖಲಾಗಿದೆ.


ಡಿ.17ರಂದು ಮನೋಹರ್ ತನ್ನ ಮನೆಯಲ್ಲಿದ್ದ ವೇಳೆ ಆರೋಪಿಗಳು ಮನೆಯ ಅಂಗಳಕ್ಕೆ ಬಂದು ಕೈಯಿಂದ ಮತ್ತು ಮರದ ಕೋಲಿನಿಂದ ಹಲ್ಲೆ ನಡೆಸಿ,ಜಾತಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆ ಮಾಡುವ ಸಂದರ್ಭ ತನ್ನ ತಾಯಿ ರಕ್ತದೊತ್ತಡದಿಂದ ಕುಸಿದು ಬಿದ್ದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯುವಕ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 107/2023 ಕಲಂ: 143,147,447,504,323,324,506,149 ಹಾಗೂ SC & ST (prevention of atrocities amendment act 2015 u/s-3(1) (r) (s), 3 (2) (va)) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here