ಡಿ.22: ಆಲಂಕಾರು ದುರ್ಗಾಂಬಾ ಪದವಿ ಪೂರ್ವ ವಿದ್ಯಾಲಯದ ಕಿರು ಉದ್ಯಾನವನದ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ

0

ಆಲಂಕಾರು: ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ವಿದ್ಯಾಲಯದಲ್ಲಿ ಕಿರು ಉದ್ಯಾನವನದ ಉದ್ಘಾಟನೆ ಹಾಗೂ ವಾರ್ಷಿಕೋತ್ಸವವು ಡಿ.22ನೇ ಶುಕ್ರವಾರ ನಡೆಯಲಿದೆ. ಬೆಳಿಗ್ಗೆ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಪ್ಪ ಗೌಡ.ಕೆಯವರು ಧ್ವಜಾರೋಹಣ ನೇರವೆರಿಸಲಿದ್ದು, ಸಂಜೆ ದುರ್ಗಾಂಬಾ ವಿದ್ಯಾಲಯದ ಕಿರು ಉದ್ಯಾನವನದ ಉದ್ಘಾಟನೆಯನ್ನು ಪುತ್ತೂರು ರಾಮಕೃಷ್ಣ ಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಉದ್ಘಾಟಿಸಲಿದ್ದು, ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದೆ. ಆಲಂಕಾರು ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು ಸಭಾಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಅಬುದಾಬಿ ಉದ್ಯಮಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜಯರಾಮ ರೈ ಮಿತ್ರಂಪಾಡಿ, ಮಂಗಳೂರು ಎಂ.ಆರ್.ಪಿ.ಎಲ್ ನ ಸೀತಾರಾಮ ರೈ ಕೈಕಾರ, ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಹರ ಎಣ್ಣೆತ್ತೋಡಿ ಭಾಗವಹಿಸಲಿದ್ದಾರೆ.‌ ನಂತರ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಕಾರ್ಯದರ್ಶಿ ಈಶ್ವರ ಗೌಡ ಪಜ್ಜಡ್ಕ, ಮುಖ್ಯ ಗುರುಗಳಾದ ಶ್ರೀಪತಿ ರಾವ್.ಎಚ್, ಪ್ರಾಂಶುಪಾಲರಾದ ನವೀನ್ ಕುಮಾರ್ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಹರ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಗೌಡ. ಪಿ, ವಿದ್ಯಾರ್ಥಿ ನಾಯಕಿ ಮೈತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here