ಜಿ.ಪಂ, ತಾ.ಪಂ.ಚುನಾವಣೆ-ತಿಂಗಳೊಳಗೆ ಪ್ರಕ್ರಿಯೆ ಪೂರ್ಣ:ಹೈಕೋರ್ಟ್‌ಗೆ ರಾಜ್ಯ ಸರಕಾರದಿಂದ ಮಾಹಿತಿ

0

ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ,ಬಳಿಕ ಮೀಸಲು ಕರಡು ಅಧಿಸೂಚನೆ
ಆಕ್ಷೇಪಣೆಗಳಿಗೆ 10 ದಿನ ಅವಕಾಶ
ನಂತರದ 2 ವಾರಗಳಲ್ಲಿ ಮೀಸಲು ನಿಗದಿ ಪ್ರಕ್ರಿಯೆ

ಬೆಂಗಳೂರು:ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಽಸಿದ ಪ್ರಕ್ರಿಯೆಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವುದಾಗಿ ರಾಜ್ಯ ಸರಕಾರ ಹೈಕೋರ್ಟ್‌ಗೆ ಭರವಸೆ ನೀಡಿದೆ.


ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಽಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು ‘ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ದ.19ರಂದು ವಿಚಾರಣೆ ನಡೆಸಿತು.


ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು, ‘ಜಿ.ಪಂ ಮತ್ತು ತಾ.ಪಂ ಕ್ಷೇತ್ರಗಳ ಗಡಿಗಳನ್ನು ನಿರ್ಧರಿಸುವ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಈಗಾಗಲೇ ಚುರುಕುಗೊಳಿಸಲಾಗಿದೆ.ಕೊಡಗು ಜಿಲ್ಲೆಯೊಂದನ್ನು ಬಿಟ್ಟು ಉಳಿದ 30 ಜಿಲ್ಲೆಗಳ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆಯನ್ನು ಇದೇ 19ರಂದು ಸಂಜೆ ಪೂರ್ಣಗೊಳಿಸಲಾಗುತ್ತಿದ್ದು ಅಧಿಸೂಚನೆ ಹೊರಡಿಸಲಾಗುವುದು.ಅಲ್ಲದೆ,ಕ್ಷೇತ್ರಗಳಲ್ಲಿ ಮೀಸಲಾತಿ ನಿಗದಿಪಡಿಸುವ ಸಂಬಂಧ ಮುಂದಿನ ಎರಡು ವಾರಗಳಲ್ಲಿ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು.ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ನಂತರದ ಎರಡು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಾಗಿ ನ್ಯಾಯಪೀಠಕ್ಕೆ ಭರವಸೆ ನೀಡಿದರು.ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಿದ ನಂತರದ ಏಳು ದಿನಗಳಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗುವುದು.ಮೀಸಲಾತಿ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುವುದು.ನಂತರದ ಎರಡು ವಾರಗಳಲ್ಲಿ ಸಂಬಂಧಿಸಿದ ಪ್ರಾಧಿಕಾರಗಳು ಮೀಸಲು ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿವೆ ಎಂದು ಎಜಿ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಚುನಾವಣಾ ಆಯೋಗ ಪರ ಹಿರಿಯ ವಕೀಲ ಕೆ.ಎನ್.-ಣೀಂದ್ರ,‘ಸರ್ಕಾರದ ಹೇಳಿಕೆಯ ಬಗ್ಗೆ ಸಂಶಯವಿದೆ‘ ಎಂದು ಆಕ್ಷೇಪಿಸಿದರು.ಈ ಮಾತಿಗೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು,‘ಅಡ್ವೊಕೇಟ್ ಜನರಲ್ ಒಬ್ಬ ಸಾಂವಿಧಾನಿಕ ಹುದ್ದೆಯ ಜವಾಬ್ದಾರಿಯುತ ಪ್ರತಿನಿಽ.ಅವರನ್ನು ನಂಬಬಾರದೇ?ಎಂದು ಪ್ರಶ್ನಿಸಿದರಲ್ಲದೆ, ಅವರ ಮೇಲೆ ಭರವಸೆ ಇಡಬೇಕಾಗುತ್ತದೆ.ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸುವ ಬಗೆಗಿನ ಹೇಳಿಕೆಯನ್ನು ಲಿಖಿತವಾಗಿ ಸಲ್ಲಿಸಬೇಕು.ಅಡ್ವೊಕೇಟ್ ಜನರಲ್ ಅವರ ಈ ಹೇಳಿಕೆಯನ್ನೇ ನ್ಯಾಯಪೀಠ ಮುಚ್ಚಳಿಕೆ ಎಂದು ಪರಿಗಣಿಸಲಿದೆ ಎಂದು ತಿಳಿಸಿದರು.ಇದಕ್ಕೆ ಎಜಿ ಶಶಿಕಿರಣ ಶೆಟ್ಟಿ ಒಪ್ಪಿಗೆ ನೀಡಿದರು.ಇದನ್ನು ಪರಿಗಣಿಸಿದ ನ್ಯಾಯಪೀಠ,ಈ ಸಂಬಂಧ ಎಜಿ ಲಿಖಿತ ಪ್ರಮಾಣಪತ್ರ ಸಲ್ಲಿಸಬೇಕು.ಅವರು ನೀಡಿರುವ ಭರವಸೆ ಕಾರ್ಯಗತಗೊಳ್ಳದೇ ಹೋದರೆ ರಾಜ್ಯ ಚುನಾವಣಾ ಆಯೋಗವು ಅಗತ್ಯ ಕ್ರಮಕ್ಕಾಗಿ ಪುನಃ ನ್ಯಾಯಾಲಯದ ಮೆಟ್ಟಿಲೇರಬಹುದು ಎಂದು ತಿಳಿಸಿ ಅರ್ಜಿ ವಿಲೇವಾರಿ ಮಾಡಿತು.

ವಿಳಂಬ ದೋರಣೆಗೆ ಸರಕಾರಕ್ಕೆ 5 ಲಕ್ಷ ರೂ.ದಂಡ:
ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರ ಆಡಳಿತದ ಅವಧಿ ಮುಕ್ತಾಯಗೊಂಡು ವರ್ಷ ಕಳೆದಿದ್ದರೂ ನಾನಾ ಕಾರಣಗಳಿಂದಾಗಿ ಚುನಾವಣೆ ವಿಳಂಬವಾಗಿದೆ.ಜಿ.ಪಂ.,ತಾ.ಪಂ.ಚುನಾವಣೆಗಳನ್ನು ನಿಗದಿತ ಅವಧಿಯೊಳಗೆ ನಡೆಸದೆ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ.ದಂಡವನ್ನೂ ವಿಧಿಸಿತ್ತು.ಈ ದಂಡದ ಮೊತ್ತವನ್ನು ಸರಕಾರ ಈಗಾಗಲೇ ಪಾವತಿ ಮಾಡಿದೆ.

LEAVE A REPLY

Please enter your comment!
Please enter your name here