ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ

0

ಪುತ್ತೂರು:ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.20ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಎಸ್ ಜಿ ಎಂ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರು ಶ್ರೀನಿವಾಸ್ ಎಚ್ ಬಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶಾಲಾ ಚಟುವಟಿಕೆಗಳ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು.

ವಕೀಲ ಲತನ್ ಜಿ ಎಸ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಮಾನಿಲತ್ತಾಯ , ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ ,ಸಂಚಾಲಕ ಸರ್ವೋತ್ತಮ್ ಬೋರ್ಕರ್ ಹಾಗೂ ಶಾಲಾ ಮುಖ್ಯ ಗುರು ವನಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಿಕ್ಷಕ ಮುರಳಿ ಮೋಹನ ಶೆಟ್ಟಿ ಸ್ವಾಗತಿಸಿ, ಶಿಕ್ಷಕಿ ಸುಪ್ರಭಾ ನಿರೂಪಿಸಿ, ಶಿಕ್ಷಕಿ ವಿನುತಾ ವಂದಿಸಿದರರು.


ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಶ್ರೀನಿವಾಸ್ ಎಚ್ ಬಿ ಶಾಲೆಗೆ ನೆನಪಿನ ಕಾಣಿಕೆಯಾಗಿ ಗಡಿಯಾರವನ್ನು ನೀಡಿದರು. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಮಾಣಿಲತ್ತಾಯ ಇವರು ಶಾಲೆಗೆ 7,000 ಮೌಲ್ಯದ’ ಏರ್ ಕೂಲರ್ ‘ಅನ್ನು ಕೊಡುಗೆಯಾಗಿ ನೀಡಿದರು. 2008 -9 ನೇ ಸಾಲಿನ ಎಸ್ ಎಲ್ ಸಿ ವಿದ್ಯಾರ್ಥಿಗಳು 30,000 ಮೌಲ್ಯದ ‘ಬ್ಯಾಂಡ್ ಸೆಟ್’ ಅನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here