ಡಿ.23: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಾರ್ಷಿಕೋತ್ಸವ-ಸಾಂಸ್ಕೃತಿಕ ಸಮನ್ವಯ-2023 ವರ್ಷದ ಹರ್ಷ

0

ಪುತ್ತೂರು:ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧೀನದಲ್ಲಿರುವ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಸಾಂಸ್ಕೃತಿಕ ಸಮನ್ವಯ 2023 ವರ್ಷದ ಹರ್ಷ ಕಾರ್ಯಕ್ರಮಗಳು ಡಿ.23ರಂದು ಸಂಜೆ ನಡೆಯಲಿದೆ.


ವಿವೇಕಾನಂದ ವಿದ್ಯಾ ವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಮಾರುತಿಪುರ ರೈತ ಬಂಧುವಿನ ಮ್ಹಾಲಕ ಶಿವಶಂಕರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಯು.ಆರ್ ಪ್ರಾಪರ್ಟಿಸ್‌ನ ಉಜ್ವಲ್ ಕುಮಾರ್ ಪ್ರಭು, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಮೋಹಿನಿ ದಿವಾಕರ ಅಭ್ಯಾಗತರಾಗಿ ಆಗಮಿಸಲಿದ್ದಾರೆ ಎಂದು ಶಾಲಾ ಮುಖ್ಯ ಗುರು ಆಶಾ ಬೆಳ್ಳಾರೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here