ಡಿ.24:ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜದ ಮಹಾಸಭೆ

0

ಪುತ್ತೂರು: ವಿಶ್ವಬ್ರಾಹ್ಮಣ ಸೇವಾ ಸಂಘ ಬೊಳುವಾರು ಪುತ್ತೂರು, ವಿಶ್ವಕರ್ಮ ಯುವ ಸಮಾಜ ಬೊಳುವಾರು ಪುತ್ತೂರು ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.24ರಂದು ರವಿವಾರ ಅಪರಾಹ್ನ 3.30ಕ್ಕೆ ಸರಿಯಾಗಿ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ. ಬಂಟ್ವಾಳ ಎಸ್.ವಿ.ಎಸ್ ಪ್ರೌಢಶಾಲೆಯ ಸಂಸ್ಕೃತ ಅಧ್ಯಾಪಕರ ಮುರಳೀಧರ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಯುವ ಪ್ರತಿಭೆಗಳಾದ ಧನರಾಜ್ ಆಚಾರ್ಯ ಮಾಮೇಶ್ವರ, ಶ್ರೇಯಾ ಆಚಾರ್ಯ ಆಲಂಕಾರುರವರನ್ನು ಗೌರವಿಸಲಾಗುವುದು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ಸಭಾ ಕಾರ್ಯಕ್ರಮದ ಬಳಿಕ ಮನೋರಂಜನಾ ಕಾರ್ಯಕ್ರಮವು ನಡೆಯಲಿದೆ. ಎರಡು ಸಂಘದ ಸದಸ್ಯರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here