ಉಪ್ಪಿನಂಗಡಿಯಲ್ಲಿ ಲಾರಿ- ರಿಕ್ಷಾ ಅಪಘಾತ: ಮೂವರು ಗಂಭೀರ

0

ಉಪ್ಪಿನಂಗಡಿ: ಇಲ್ಲಿನ ಕುಮಾರಧಾರಾ ನದಿಯ ಸೇತುವೆಯಲ್ಲಿ ಅಟೋ ರಿಕ್ಷಾ ಹಾಗು ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಅಟೋ ರಿಕ್ಷಾದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.


ಪೆರ್ನೆಯ ಫ್ರಾಂಕ್ಲಿನ್ ಗ್ಲನ್ ಲೋಬೋ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಅಟೋ ರಿಕ್ಷಾಕ್ಕೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಚಾಲಕ ಫ್ರಾಂಕ್ಲಿನ್ ಗ್ಲನ್ ಲೋಬೋ (23) ಅವರ ಕಾಲು ತುಂಡರಿಸಲ್ಪಟ್ಟಿದೆ. ರಿಕ್ಷಾದಲ್ಲಿ ಚಾಲಕ ಹಾಗೂ ಪ್ರಯಾಣಿಕರಾದ ಉತ್ತರ ಭಾರತ ಮೂಲದ ಅಜಯ್ ಖಾರ್ವಾಲ್ (17), ಪೂರನ್ ಸಿಂಗ್ ಖಾರ್ವಾಲ್ (29) ಎಂಬವರೂ ಗಂಭೀರ ಗಾಯಗೊಂಡಿದ್ದಾರೆ. ಇವರು ಪೆರ್ನೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಗಾಯಾಳುಗಳೆಲ್ಲರನ್ನು ಉಪ್ಪಿನಂಗಡಿಯ ಅಂಬುಲೆನ್ಸ್ ಚಾಲಕ ಫಾರೂಕ್ ಜಿಂದಗಿ ತ್ವರಿತವಾಗಿ ಪುತ್ತೂರು ಆಸ್ಪತ್ರೆಗೆ ರವಾನಿಸುವಲ್ಲಿ ಸಹಕರಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಘಟನೆಯಿಂದ ತಡೆಹಿಡಿಯಲ್ಪಟ್ಟ ಹೆದ್ದಾರಿ ಸಂಚಾರವನ್ನು ಸುಗಮಗೊಳಿಸುವಲ್ಲಿ ಯಶಸ್ವಿಯಾದರು.

LEAVE A REPLY

Please enter your comment!
Please enter your name here