ಪುತ್ತೂರು ಸರಕಾರಿ ಆಸ್ಪತ್ರೆ ಐಸಿಯುವಿನಲ್ಲಿ ತಡ ರಾತ್ರಿ ಅಗ್ನಿ ಅವಘಡ –  ಅಪಾಯದಿಂದ ಪಾರಾದ ರೋಗಿಗಳು

0

 

ಅಗ್ನಿಶಾಮಕದಳದ ಕಾರ್ಯಾಚರಣೆ, ದತ್ತ ಮಾಲಾಧಾರಿಗಳ ಸಹಕಾರದಿಂದ ಬೆಂಕಿಯ ಶಮನ

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ  ಐ ಸಿ ಯು ವಿನಲ್ಲಿ  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನಕ್ಕೆ ಪುತ್ತೂರು ವಿ.ಹಿಂ.ಪ ಕಾರ್ಯಾಲಯದಲ್ಲಿದ್ದ ದತ್ತ ಮಾಲಾಧಾರಿಗಳು ಬಂದು ಬೆಂಕಿ ಶಮನಕ್ಕೆ ಸಹಕರಿಸಿದರು. ವಿಷಯ ತಿಳಿದು ರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿದ್ದಾರೆ.

ಆಸ್ಪತ್ರೆಯ ಐ ಸಿ ಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು‌ ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಶಮನದ ಬಳಿಕ ದತ್ತ‌ ಮಾಲಾಧಾರಿಗಳು ಅಸ್ಪತ್ರೆಯನ್ನು ಶುಚಿಗೊಳಿಸಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆಶಾ ಪುತ್ತೂರಾಯ ಈ ಸಂದರ್ಭ ಉಪಸ್ಥಿತರಿದ್ದರು. 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here