ಇಂದು ಶಾಖೆಪುರದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ರಾಮಕುಂಜ: ಹಿರೆಬಂಡಾಡಿ-ಕೊಯಿಲ ಶಾಖೆಪುರ ಸಂಜೀವಿನಿ ಮಿತ್ರವೃಂದದ ಆಶ್ರಯದಲ್ಲಿ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ 5ನೇ ವರ್ಷದ ಕಥಾ ಸಹಿತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಡಿ.24ರಂದು ಶಾಖೆಪುರ ಮೈದಾನದಲ್ಲಿ ನಡೆಯಲಿದೆ.


ಬೆಳಿಗ್ಗೆ 9 ಗಂಟೆಗೆ ಗಣಹೋಮ ನಡೆಯಿತು. ಸಂಜೆ 4ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಸಂಜೆ 6.30ರಿಂದ ಸಂಜೀವಿನಿ ವೇದಿಕೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಖೆಪುರ ಸಂಜೀವಿನಿ ಮಿತ್ರವೃಂದದ ಸದಸ್ಯ ದಯಾನಂದ ಸರೋಳಿ ಅಧ್ಯಕ್ಷತೆ ವಹಿಸಲಿದ್ದಾರೆ. ದೈವ ನರ್ತಕರು, ಸಿವಿಲ್ ಇಂಜಿನಿಯರ್ ಆಗಿರುವ ದ.ಕ.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಡಾ.ರವೀಶ ಪಡುಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ದೈವದ ಮಧ್ಯಸ್ಥರಾದ ವಿನೋದ್ ಬೋಂಟ್ರಪಾಲ್, ಸಮಾಜ ಸೇವಕ ರಮಾನಂದ ಪೆರಾಬೆ ಅವರಿಗೆ ಸನ್ಮಾನ ನಡೆಯಲಿದೆ. ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ಬಳಿಕ ಅಭಿನಯ ಕಲಾವಿದರು ಉಡುಪಿ ಅಭಿನಯಿಸುವ ಕುತೂಹಲಭರಿತ ಹಾಸ್ಯಮಯ ನಾಟಕ ಶಾಂಭವಿ ಪ್ರದರ್ಶನಗೊಳ್ಳಲಿದೆ ಎಂದು ಸಂಜೀವಿನಿ ಮಿತ್ರವೃಂದದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here