ಉಪ್ಪಿನಂಗಡಿ ಶ್ರೀರಾಮ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

0

ಪುತ್ತೂರು: ಉಪ್ಪಿನಂಗಡಿ ವೇದಶಂಕರ ನಗರದಲ್ಲಿರುವ ಶ್ರೀರಾಮ ಶಾಲೆಯಲ್ಲಿ ಡಿ.23ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಸಚಿನ್ ಜೈನ್ ಹಳೆಯೂರು ಅವರು ಮಕ್ಕಳನ್ನು ಉದ್ದೇಶಿಸಿ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳುವುದು ಹೇಗೆ ಎಂಬುದರ ಕುರಿತು ಹಲವು ದೃಷ್ಟಾಂತಗಳ ಮೂಲಕ ವಿವರಿಸಿದರು.

ಅತಿಥಿಯಾಗಿದ್ದ ಕಲಾವಿದ ರವಿ ರಾಮಕುಂಜ ಅವರು ತಮ್ಮ ಹಾಸ್ಯದ ಅಭಿನಯದ ಮೂಲಕ ಮಕ್ಕಳನ್ನು ನಗೆಗಡಲಿನಲ್ಲಿ ತೇಲಿಸಿದರು. ಶಾಲೆಯ ಹಿತೈಷಿ ವಿಶ್ವನಾಥ ಶೆಟ್ಟಿ ಕಂಗ್ವೆ ಅವರು ಸಮಯೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಬರುವಂತೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷೆ ಅನುರಾಧ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕ ಯು.ಜಿ ರಾಧ ಮತ್ತು ಪೋಷಕ ಸಂಘದ ಅಧ್ಯಕ್ಷ ಮೋಹನ್ ಭಟ್ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ ವಿಭಾಗದ ಮುಖ್ಯಗುರು ರಘುರಾಮ ಭಟ್ ಸಿ. ಸ್ವಾಗತಿಸಿ, ಯಶಸ್ವಿನಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಗುರು ವಿಮಲ ವಂದಿಸಿದರು.

LEAVE A REPLY

Please enter your comment!
Please enter your name here