ಸವಣೂರು ಉ‌.ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಸವಣೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ.24 ರಂದು ಜರಗಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದುರವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೈ ದೂಡಿಮುಳ್ಳು ವಹಿಸಿದ್ದರು. ‌

ಎಸ್ ಡಿ ಎಂಸಿ ಅಧ್ಯಕ್ಷ ಮಹಮ್ಮದ್ ಹನೀಫ್, ಸವಣೂರು ಗ್ರಾ.ಪಂ, ಮಾಜಿ ಅಧ್ಯಕ್ಷೆ ರಾಜೀವಿ‌ ಶೆಟ್ಟಿ, ಶಾಲಸ ಮುಖ್ಯ ಗುರು ನಿಂಗರಾಜು, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೈ ಸುಡಿಮುಳ್ಳು , ಕಾರ್ಯದರ್ಶಿ ಅಬ್ದುಲ್ಲಾ ಎಸ್ ಇ.ಸೊಂಪಾಡಿ, ಸವಣೂರು ಗ್ರಾ.ಪಂ, ಸದಸ್ಯ ಬಾಬು ಎನ್, ಮಾಜಿ ಸದಸ್ಯ ಸತೀಶ್ ಬಲ್ಯಾಯ, ಕೆಸಿಡಿಸಿ ನಿವೃತ್ತ ಉದ್ಯೋಗಿ ಚೆನ್ನಪ್ಪ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ , ಮಾಜಿ ಅಧ್ಯಕ್ಷ ಪ್ರಕಾಶ್ ಮಾಲೆತ್ತಾರು, ಎಸ್ ಡಿಎಂಸಿ ಉಪಾಧ್ಯಕ್ಷೆ ಜಯಶ್ರೀ , ಸದಸ್ಯರುಗಳಾದ ಆಶ್ರಫ್ ಜನತಾ, ಉಮ್ಮರ್ ಅಬಾಬಿಲ್, ಸುರೇಶ್ ಕೆರೆಕೋಡಿ, ಸುರೇಖಾ, ಸಾಮಾಜಿಕ ಮುಂದಾಳು ಜಯರಾಮ ರೈ ಮೂಡಂಬೈಲು ಉಪಸ್ಥಿತರಿದ್ದರು. ಸವಣೂರು ಪ್ರಾಥಮಿಕ ಕೃಷಿಕ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿ, ಸವಣೂರು ಗ್ರಾ.ಪಂ, ಸದಸ್ಯ ಗಿರಿಶಂಕರ್ ಸುಲಾಯ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here