ಡಿ.26-28: ಸರ್ವೆ ಜಾತ್ರೆ

0

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವವು ಡಿ.26ರಿಂದ ಡಿ.28ರ ವರೆಗೆ ನಡೆಯಲಿದೆ.
ಡಿ.26ರಂದು ಬೆಳಿಗ್ಗೆ ಗಂಟೆ 8-30ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಗಣಪತಿಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು ಮದ್ಯಾಹ್ಯ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 4-30ರಿಂದ ವಿಠಲ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ಸಂಜೆ ಗಂಟೆ 6-30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ರಾತ್ರಿ ಗಂಟೆ 8-00ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.

ಡಿ.27ರಂದು ಬೆಳಿಗ್ಗೆ ಗಂಟೆ 9-00ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6-00ರಿಂದ ದೈವಗಳ ಭಂಡಾರ ತೆಗೆಯುವುದು, ರಾತ್ರಿ ಗಂಟೆ 7-00ಕ್ಕೆ ರಂಗಪೂಜೆ ಮಂತ್ರಾಕ್ಷತೆ, ರಾತ್ರಿ ಗಂಟೆ 7-30ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ ಗಂಟೆ 8-30ಕ್ಕೆ ನೇಮೋತ್ಸವ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.

ಡಿ.28ರಂದು ಬೆಳಿಗ್ಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮದ್ಯಾಹ್ನ ಗಂಟೆ 12-00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here