ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘ – ಅಧ್ಯಕ್ಷರಾಗಿ ಸತ್ಯನಾರಾಯಣ ಕಲ್ಲೂರಾಯ, ಉಪಾಧ್ಯಕ್ಷರಾಗಿ ಕುಸುಮಾಧರ ಗೌಡ ಇಡ್ಯಡ್ಕ

0

ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸತ್ಯನಾರಾಯಣ ಕಲ್ಲೂರಾಯ ಹಾಗೂ ಉಪಾಧ್ಯಕ್ಷರಾಗಿ ಕುಸುಮಾಧರ ಗೌಡ ಇಡ್ಯಡ್ಕ ಅವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ಚಾರ್ವಾಕ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಸಲಾಯಿತು.
ಚುನಾವಣಾ ರಿಟರ್ನಿಂಗ್ ಅಧಿಕಾರಿ ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಅಧೀಕ್ಷಕರಾದ ಬಿ. ನಾಗೇಂದ್ರರವರು ಚುನಾವಣಾ ಪ್ರಕ್ರೀಯೆ ನಡೆಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಘೋಷಣೆ ಮಾಡಿ ನೂತನ ನಿರ್ದೇಶಕರುಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಂಘದ ನೂತನ ನಿರ್ದೇಶಕರಾದ ಗೋಪಾಲಕೃಷ್ಣ ಗೌಡ ಬಾರೆಂಗಳ, ಡಿ. ವಸಂತ ದಲಾರಿ, ಗಣೇಶ್ ಮುಂಗ್ಲಿಮಜಲು, ಸದಾಶಿವ ಗೌಡ ಜತ್ತೋಡಿ, ರಾಮಣ್ಣ ಗೌಡ ಪೊನ್ನೆತ್ತಡಿ, ರಾಮಚಂದ್ರ ಕೋಳ್ಪೆ, ವಾಸಪ್ಪ ಗೌಡ ನಾಣಿಲ, ಕಾಂತ ಪರವ, ರಾಜೀವಿ ಬೊಮ್ಮೋಳಿಗೆ, ಕುಸುಮಾವತಿ ಕಲ ಈ ಸಂದರ್ಭದಲ್ಲಿದ್ದರು. ಸಂಘದ ನಿಕಟಪೂರ್ವ ಅಧ್ಯಕ್ಷರಾದ ಧನಂಜಯ ಕೇನಾಜೆ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಹಾರೈಸಿದರು.
ಸಂಘದ ಕಾರ್ಯದರ್ಶಿ ದಮಯಂತಿ ಮುದುವ ಸ್ವಾಗತಿಸಿದರು. ವಂದಿಸಿದರು. ಸಂಘದ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here