ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಶಿಲನ್ಯಾಸದ ಆಮಂತ್ರಣ ಪತ್ರ ಬಿಡುಗಡೆ 

0

ಬೆಟ್ಟಂಪಾಡಿ: ಇಲ್ಲಿನ ವಿನಾಯಕನಗರ ‌ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ಪುನರ್ ನಿರ್ಮಾಣದ  ಶಿಲನ್ಯಾಸ ಸಮಾರಂಭ ಜ. 4 ರಂದು ನಡೆಯಲಿದ್ದು, ಅದರ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.

ಪಾಣಾಜೆ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಡಾ. ಅಖಿಲೇಶ್ ಪಿ.ಯಂ. ಅರ್ಧಮೂಲೆ  ಬಿಡುಗಡೆಗೊಳಿಸಿದರು. ಇದೇ ವೇಳೆ ಗೌರವ ಉಪಸ್ಥಿತಿಯಾಗಿ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ವಿನೋದ್ ರೈ ಗುತ್ತು,   ಮಂದಿರದ ಮಾಜಿ ಕೋಶಾಧಿಕಾರಿ ಚಂದ್ರಶೇಖರ ಭಟ್ ಕೋಡಿ, ಹಿರಿಯ ಭಜಕರಾದ ಸಾಂತಪ್ಪ ಗೌಡ ಪಂಬೆಜಾಲು, ಬೆಟ್ಟಂಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮಾಜಿ ಅಧ್ಯಕ್ಷ ಪ್ರಭಾಕರ್ ರೈ ಬಾಜುವಳ್ಳಿ, ಪುನರ್ ನಿರ್ಮಾಣ ಸಮಿತಿ ಯ ಗೌರವಾಧ್ಯಕ್ಷ  ವೇ.ಮೂ. ರಾಧಾಕೃಷ್ಣ ಭಟ್ ಕಕ್ಕೂರು, ಮಂದಿರದ ಗೌರವಾಧ್ಯಕ್ಷ ನಾರಾಯಣ ಮನೋಳಿತ್ತಾಯ ಕಾಜಿಮೂಲೆ, ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಜಯಪ್ರಕಾಶ್ ರೈ ಚೆಲ್ಯಡ್ಕ, ಮಂದಿರದ ಅಧ್ಯಕ್ಷ  ಕೃಷ್ಣಪ್ಪ ಕುಲಾಲ್ ಉಡ್ಡಂಗಳ ಹಾಗು ಸಮಿತಿಯ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here