ಡಿ.28: ಪುಣಚ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ವಾರ್ಷಿಕೋತ್ಸವ

0

ಪುಣಚ: ಪುಣಚ ದೇವಿನಗರ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಡಿ.28ರಂದು ನಡೆಯಲಿದೆ.
ಬೆಳಿಗ್ಗೆ ದೀಪ ಪ್ರಜ್ವಲನೆ, ಪ್ರಾರ್ಥನೆ, ಬಳಿಕ ಶ್ರೀದೇವಿ ಅಂಗನವಾಡಿ, ಶಿಶುಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರಿನ ಹಿರಿಯ ನ್ಯಾಯವಾದಿ ಕೆ.ಪಿ ವಾಸುದೇವ ರಾವ್ ಅಧ್ಯಕ್ಷತೆ ವಹಿಸಲಿದ್ದು, ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್’ನ ಪದವೀಧರ ಸಹಶಿಕ್ಷಕಿ ನಳಿನಿ ಡಿ. ಹಾಗೂ ಬೆಂಗಳೂರಿನ ಸಿವಿಲ್ ಇಂಜಿನಿಯರ್ ವೇದವ್ಯಾಸ್ ಕಟ್ಟೆ ಮುಖ್ಯ ಅತಿಥಿಯಾಗಿ ಭಾಗವಹಿಲಿರುವರು. ಸಭಾ ಕಾರ್ಯಕ್ರಮದ ಬಳಿಕ ಭೋಜನ ನಡೆದು ನಂತರ ಸಾಯಂಕಾಲದವರೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು ಎಂದು ಶಾಲಾ ಆಡಳಿತ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here