ಕೊಂಬಾರು ಶಾಲೆಯಲ್ಲಿ ಮೆಸ್ಕಾಂನಿಂದ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

0

ಕಡಬ: ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹ 2023 ವಿದ್ಯುತ್ ಸುರಕ್ಷತೆ ಜಾಗೃತಿ ಕಾರ್ಯಕ್ರಮ ಕೊಂಬಾರು ಪ್ರಾಥಮಿಕ ಶಾಲೆಯಲ್ಲಿ ಡಿ.26ರಂದು ನಡೆಯಿತು. ಮೆಸ್ಕಾಂ ಕಡಬ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕರಾದ ಸಜಿಕುಮಾರ್‌ ಮಕ್ಕಳಿಗೆ ವಿದ್ಯುತ್ ಅವಘಡ, ವಿದ್ಯುತ್ ಸುರಕ್ಷತೆ, ಮುಂಜಾಗ್ರತೆ ಹಾಗೂ ವಿದ್ಯುತ್ ಉಳಿತಾಯ ಮೊದಲಾದ ವಿಷಯಯಗಳ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೊಂಬಾರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರೇಗಪ್ಪ, ಸಹಾಯಕ ಲೆಕ್ಕಾಧಿಕಾರಿ ಕೃಷ್ಣಮೂರ್ತಿ, ಬಿಳಿನೆಲೆ ಶಾಖಾಧಿಕಾರಿ ವಸಂತ್ ಕುಮಾರ್ ಹಾಗೂ ಶಾಲೆಯ ಶಿಕ್ಷಕರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here