ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘ – ಅಧ್ಯಕ್ಷರಾಗಿ ಚಂದ್ರಶೇಖರ ರಾವ್ ನಿಧಿಮುಂಡ, ಉಪಾಧ್ಯಕ್ಷರಾಗಿ ಪ್ರೇಮಲತಾ ಚಾಕೋಟೆ ಅವಿರೋಧ ಆಯ್ಕೆ

0

ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ರಾವ್ ನಿಧಿಮುಂಡ, ಉಪಾಧ್ಯಕ್ಷರಾಗಿ ಪ್ರೇಮಲತಾ ಸಿ.ಹೆಚ್ ಚಾಕೋಟೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದ.27ರಂದು ಸಂಘದ ಆವರಣದಲ್ಲಿ ನಡೆದ ಅಧ್ಯಕ್ಷ/ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ರಿಟರ್ನಿಂಗ್ ಅಧಿಕಾರಿಯಾಗಿದ್ದ ಶಿವಲಿಂಗಯ್ಯ ಎಂ ರವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.


ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಬೆಂಬಲಿತರಾಗಿ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ರಾವ್ ನಿಧಿಮುಂಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪ್ರೇಮಲತಾ ಸಿ.ಹೆಚ್ ಚಾಕೋಟೆಯವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆ ನಡೆಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಸಂಘದ ಆಡಳಿತ ಮಂಡಳಿಯ ನೂತನ ನಿರ್ದೇಶಕರುಗಳಾದ ಸುರೇಂದ್ರ ಬೋರ್ಕರ್ ನನ್ಯ, ಜಗನ್ನೀವಾಸ ಗೌಡ ನಿಧಿಮುಂಡ, ಸುಧೀಶ್ ಬೋರ್ಕರ್, ರಾಮಣ್ಣ ನಾಯ್ಕ ಆಚಾರಿಮೂಲೆ, ನಾರಾಯಣ ಶರ್ಮ ಬರೆಕರೆ, ದಿವಾಕರ ಪ್ರಭು ಮುಂಡಕೊಚ್ಚಿ, ನಾರಾಯಣ ರೈ ಮದ್ಲ, ನಿರ್ಮಲಾ ಎಂ, ಚಂದ್ರಾವತಿ ಮೇಲ್ಪಾದೆಯವರು ಪಾಲ್ಗೊಂಡಿದ್ದರು. ಸಂಘದ ಸಿಬ್ಬಂದಿಗಳಾದ ಬಾಲಕೃಷ್ಣ ಕೆದಿಲಾಯ, ಸುಪ್ರೀತ್ ಕುಮಾರ್‌ರವರು ಸಹಕರಿಸಿದರು.
ಸಂಘದ ಆಡಳಿತ ಮಂಡಳಿಗೆ ದ.18ರಂದು ನಡೆದಿದ್ದ ಚುನಾವಣೆಯಲ್ಲಿ 13 ಸ್ಥಾನಗಳಲ್ಲಿ 12ರಲ್ಲಿ ಸಹಕಾರ ಭಾರತಿ, 1ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

LEAVE A REPLY

Please enter your comment!
Please enter your name here