ಪೆರ್ನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇಂದಿನಿಂದ ವಾರ್ಷಿಕ ಜಾತ್ರೋತ್ಸವ

0

ಉಪ್ಪಿನಂಗಡಿ: ಶ್ರೀ ಸೋದೆ ಮಠಾಧೀಶರು ಪ್ರತಿಷ್ಠಾಪಿಸಿದ ಪೆರ್ನೆಯ ಕಳೆಂಜ ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಡಿ.28ರಿಂದ 29ರತನಕ ವಿಜೃಂಭಣೆಯಿಂದ ನಡೆಯಲಿದೆ.
ಡಿ.28ರಂದು ಬೆಳಗ್ಗೆ 8ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ ಸ್ವಸ್ತಿ ಪಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾ ಹೋಮ, ಮಹಾವಿಷ್ಣು ಯಾಗ, ಬೆಳಗ್ಗೆ 9-30ಕ್ಕೆ ಉಗ್ರಾಣ ಮುಹೂರ್ತ , 1೦ಕ್ಕೆ ಹಸಿರು ಹೊರೆ ಕಾಣಿಕೆ, 11 ಕ್ಕೆ ಹೋಮದ ಪೂರ್ಣಾಹುತಿ ನಡೆಯಲಿದೆ. ಮಧ್ಯಾಹ್ನ 12:3೦ಕ್ಕೆ ಸುವಾಸಿನಿ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 4ರಿಂದ 7:3೦ರವರೆಗೆ ಭಜನಾ ಕಾರ್ಯಕ್ರಮ ನಡೆದು ರಾತ್ರಿ 8ಕ್ಕೆ ರಂಗಪೂಜೆ ನಡೆದು, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಲಿದೆ.
ಡಿ.29ರಂದು ಬೆಳಗ್ಗೆ 8 ರಿಂದ ಮಹಾಗಣಪತಿ ಹೋಮ, ಕಲಶಪೂಜೆ, 10 ರಿಂದ 12ವರೆಗೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ 11ರಿಂದ ಶ್ರೀ ದೇವರಿಗೆ ಕಲಶಾಭಿಷೇಕಗಳು, ಕ್ಷೇತ್ರದ ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ ಸೇವೆ, ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 3ರಿಂದ 6:3೦ರವರೆಗೆ ಭಜನಾ ಕಾರ್ಯಕ್ರಮ ನಡೆದು, ರಾತ್ರಿ 7ರಿಂದ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here