![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ರಾಮಕುಂಜ: ಕುಶಾಲನಗರದ ಜ್ಞಾನಗಂಗಾ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಶಾಲಾ ಕಬಡ್ಡಿ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ತಂಡದ ನಾಯಕ ಕಾರ್ತಿಕ್ ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಹಾಗೂ ಪ್ರೀತಂ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಸತ್ಯ, ಹಿತೇಶ್, ನಿತೇಶ್ ಗೌಡ, ಯಶವಂತ, ಮೌನೇಶ್, ದಿಲೀಪ್, ಮಹಮ್ಮದ್ ರೈಜ್, ಕೃತಿಕ್, ನಿಖಿಲ್ ಎನ್.ಡಿ, ಸಂನ್ವಿತ್ ತಂಡವನ್ನು ಪ್ರತಿನಿಧಿಸಿದ್ದರು. ತಂಡಕ್ಕೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ಪೋಷಕರು ಸಹಕರಿಸಿದ್ದರು.
![](https://puttur.suddinews.com/wp-content/uploads/2023/12/ramakunja-kabbadi.jpg)