ವಳಾಲು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಿರ್ದೇಶಕರ ಅವಿರೋಧ ಆಯ್ಕೆ

0

ನೆಲ್ಯಾಡಿ: ಬಜತ್ತೂರು ಗ್ರಾಮದ ವಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ 13 ಸ್ಥಾನಗಳಿಗೆ ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಪಿ.ವಸಂತ ಗೌಡ ವಳಾಲು ಹಾಗೂ ಉಪಾಧ್ಯಕ್ಷರಾಗಿ ಉಮೇಶ್ ಓ.ವಳಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಮೀಸಲು ಸ್ಥಾನದಿಂದ ಪಿ.ವಸಂತ ಗೌಡ ವಳಾಲು, ಉಮೇಶ್ ಓ.ವಳಾಲು, ಸುಧಾಕರ ಎನ್.ನಾಮಾರ್, ದಾಮೋದರ ಗೌಡ ಶೇಡಿ, ವಾಣಿಶ್ರೀ ವಳಾಲು, ರಾಮಪ್ಪ ಪೂಜಾರಿ ಕೊಡಿಪ್ಪಾಣ, ಹೊನ್ನಪ್ಪ ಗೌಡ ಸುಳ್ಯಮನೆ ಆಯ್ಕೆಗೊಂಡಿದ್ದಾರೆ. ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಿಂದ ಅಣ್ಣಿ ಪೂಜಾರಿ ಮಣಿಕ್ಕಳ, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನದಿಂದ ಅನಂತನಾಭ ಆರಾಲು, ಪರಿಶಿಷ್ಠ ಜಾತಿ ಮೀಸಲು ಸ್ಥಾನದಿಂದ ಯಮುನಾ ನೀರಕಟ್ಟೆ, ಪರಿಶಿಷ್ಠ ಪಂಗಡ ಮೀಸಲು ಸ್ಥಾನದಿಂದ ನವೀನ ಪಡ್ಪು, ಮಹಿಳಾ ಮೀಸಲು ಸ್ಥಾನದಿಂದ ಸುಶೀಲ ಪಿ.,ಹಾಗೂ ಪಿ.ಸುಲೋಚನಾ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್.ಅವರು ಚುನಾವಣಾಧಿಕಾರಿಯಾಗಿದ್ದರು. ಸಂಘದ ಕಾರ್ಯನಿರ್ವಹಣಾಧಿಕಾರಿ ಪದ್ಮಾವತಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ:

ನೂತನ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪಿ.ವಸಂತ ಗೌಡ ವಳಾಲು ಹಾಗೂ ಉಪಾಧ್ಯಕ್ಷರಾಗಿ ಉಮೇಶ್ ಓ.ವಳಾಲು ಆಯ್ಕೆಯಾದರು. ಸಭೆಯಲ್ಲಿ ನಿರ್ದೇಶಕರು ಉಪಸ್ಥಿತರಿದ್ದರು. ಚುನಾವಣಾಧಿಕಾರಿ ಶೋಭಾ ಎನ್.ಎಸ್.ಅವರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿದರು.

LEAVE A REPLY

Please enter your comment!
Please enter your name here