ಕಲ್ಲಾರೆಯಲ್ಲಿ ಗೀತಾಜಯಂತಿ ಕಾಯಕ್ರಮ

0

ಪುತ್ತೂರು: ವೈಕುಂಠ ಏಕಾದಶಿಯಂದು ನವ್ಯಶ್ರೀ ಮಹಿಳಾ ಮಂಡಳಿ ಪುತ್ತೂರು, ಶಿವಳ್ಳಿ ಸಂಪದ ಮಹಿಳಾ ವಿಭಾಗ, ವನಿತಾ ಸಮಾಜ ಪುತ್ತೂರು, ವಿಶ್ವ ಹಿಂದೂ ಪರಿಷತ್, ಮಾತೃಶಕ್ತಿ, ದುರ್ಗಾ ವಾಹಿನಿ ಇವರ ಆಶ್ರಯದಲ್ಲಿ ಗೀತಾಜಯಂತಿ ಕಾರ್ಯಕ್ರಮವು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ನಡೆಯಿತು. ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಪ್ರಧಾನ ಅರ್ಚಕ ವೇ ಮೂ ರಾಘವೇಂದ್ರ ಉಡುಪರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರೇಮಲತಾ ರಾವ್ ಅಧ್ಯಕ್ಷತೆ ವಹಿಸಿದ್ದರು. ಮಹಿಳೆಯರು ಭಗವದ್ಗೀತೆಯ 18 ಅಧ್ಯಾಯವನ್ನು ಪಠಣ ಮಾಡಿದರು. ನಿವೃತ್ತ ಶಿಕ್ಷಕ ಸೀತಾರಾಮ ಭಟ್ ಅವರು ಭಗವದ್ಗೀತೆಯ ಕುರಿತು ಮಾತನಾಡಿದರು. ಜಯಂತಿ ಹೆಬ್ಬಾರ್ ಪ್ರಾರ್ಥಿಸಿದರು. ವೀಣಾ ಕೊಳತ್ತಾಯ ಸ್ವಾಗತಿಸಿ, ಮೋಹಿನಿ ದಿವಾಕರ್ ವಂದಿಸಿದರು.

LEAVE A REPLY

Please enter your comment!
Please enter your name here