ನಾಳೆ(ದ.29): ಪೆರ್ಲಂಪಾಡಿ ಷಣ್ಮುಖದೇವ ಪ್ರೌಢ ಶಾಲಾ ವಾರ್ಷಿಕೋತ್ಸವ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗ ಸಂಸ್ಥೆಯಾಗಿರುವ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢ ಶಾಲಾ ವಾರ್ಷಿಕೋತ್ಸವವು ದ.29ರಂದು ಜರಗಲಿದೆ. ಬೆಳಿಗ್ಗೆ 10 ಕ್ಕೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದ್ದು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರೇವತಿ ಸಭಾಧ್ಯಕ್ಷತೆ ವಹಿಸಲಿದ್ದು, ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಎಂ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಗಂಗಾಧರ ಗೌಡ ಕೆಮ್ಮಾರ ಬಹುಮಾನ ವಿತರಿಸಲಿದ್ದಾರೆ.ಕೊಳ್ತಿಗೆ ಗ್ರಾಪಂ ಸದಸ್ಯೆ ಯಶೋಧ ಬಾಬುರಾಜೇಂದ್ರ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆ ೬ ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಷಣ್ಮುಖದೇವ ಪ್ರೌಢ ಶಾಲಾ ಅಧ್ಯಕ್ಷ ತೀರ್ಥಾನಂದ ದುಗ್ಗಳ ಸಭಾಧ್ಯಕ್ಷತೆ ವಹಿಸಲಿದ್ದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಭಾಗವಹಿಸಲಿದ್ದಾರೆ. ಶಿಕ್ಷಣ ಪ್ರೇಮಿಗಳು, ಪೋಷಕರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಆಡಳಿತ ಮಂಡಳಿ ಸಂಚಾಲಕ ಪಿ.ಶಿವರಾಮ ಭಟ್ ಬೀರ್ಣಕಜೆ, ಅಧ್ಯಕ್ಷ ತೀರ್ಥಾನಂದ ದುಗ್ಗಳ, ಕೋಶಾಧಿಕಾರಿ ಕೆ.ದಿವಾಕರ ರೈ ಕೆರೆಮೂಲೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತ್ಯಾನಂದ ಬರಡಿಮಜಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರೇವತಿ, ಮುಖ್ಯಗುರು ಕೃಷ್ಣವೇಣಿ ಎಸ್, ವಿದ್ಯಾರ್ಥಿ ನಾಯಕ ಮನ್ವಿತ್ ಹಾಗೂ ಶಿಕ್ಷಕ ವೃಂದ, ಶಿಕ್ಷಕ ರಕ್ಷಕ ವೃಂದ,ಹಿರಿಯ ವಿದ್ಯಾರ್ಥಿ ವೃಂದ, ವಿದ್ಯಾರ್ಥಿ ವೃಂದದವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here