ಡಿ.30: ಸರ್ವೆ ಕಲ್ಪಣೆ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ನೂತನ ವಿವೇಕ ಕೊಠಡಿ ಉದ್ಘಾಟನೆ

0

ಪುತ್ತೂರು: ಸರ್ವೆ ಗ್ರಾಮದ ಕಲ್ಪಣೆ ಸರಕಾರಿ ಹಿ.ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ವಿವೇಕ ಕೊಠಡಿ ಉದ್ಘಾಟನೆ ಡಿ.30ರಂದು ನಡೆಯಲಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ವಿವೇಕ ಕೊಠಡಿ ಉದ್ಘಾಟಿಸಲಿದ್ದು, ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮುಂಡೂರು ಗ್ರಾ.ಪಂ ಉಪಾಧ್ಯಕ್ಷೆ ಯಶೋಧ ಅಜಲಾಡಿ, ಸದಸ್ಯರಾದ ಪ್ರವೀಣ್ ನಾಯ್ಕ ನೆಕ್ಕಿತ್ತಡ್ಕ, ಕರುಣಾಕರ ಗೌಡ ಎಲಿಯ, ಮಹಮ್ಮದ್ ಆಲಿ, ರಸಿಕಾ ಶಿವನಾಥ ರೈ, ಕಮಲೇಶ್ ಎಸ್.ವಿ, ಕಮಲಾ ನೇರೋಳ್ತಡ್ಕ, ವಿಜಯ ಕರ್ಮಿನಡ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ದೈ.ಶಿ.ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಮುಂಡೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಪ್ರೇಮಾ, ಶಿಕ್ಷಣ ಸಂಯೋಜಕಿ ಅಮೃತಕಲಾ ಪಿ.ಎಸ್, ನರಿಮೊಗರು ಕ್ಲಸ್ಟರ್ ಸಿಆರ್‌ಪಿ ಪರಮೇಶ್ವರಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ, ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಡಿ ವಸಂತ ಹಾಗೂ ಶಾಲಾ ಮುಖ್ಯಗುರು ಕಮಲಾ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here