ಡಿ.30: ಕಾಣಿಯೂರು ಶಾಲಾ ವಾರ್ಷಿಕೋತ್ಸವ, ನೂತನ ವಿವೇಕ ಕೊಠಡಿ ಉದ್ಘಾಟನೆ

0

ಕಾಣಿಯೂರು: ಸ. ಹಿ. ಪ್ರಾ. ಶಾಲಾ ವಾರ್ಷಿಕೋತ್ಸವದ ಮತ್ತು ಶಾಲಾ ನೂತನ ವಿವೇಕ ಕೊಠಡಿಗಳ ಉದ್ಘಾಟನೆಯು ಡಿ.30ರಂದು ನಡೆಯಲಿದೆ. ಬೆಳಿಗ್ಗೆ ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಯಶೋದಾ ನೇರೋಳ್ತಡ್ಕ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಕೊಠಡಿಗಳನ್ನು ಉದ್ಘಾಟಿಸದ್ದು, ಕಾಣಿಯೂರು ಗ್ರಾ. ಪಂ.ಅಧ್ಯಕ್ಷ ವಿಶ್ವನಾಥ ಕೊಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಗ್ರಾ. ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಎಸ್ ಅಂಗಾರ ಸೇರಿದಂತೆ ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಲೆಗೆ ಕೊಡುಗೆ ನೀಡಿದ ದಾನಿಗಳನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮತ್ತು ಶಾಲೆಯ ನಿಕಟಪೂರ್ವ ಅಧ್ಯಕ್ಷರನ್ನು ಗುರುತಿಸಲಾಗುವುದು ಎಂದು ಶಾಲಾ ಮುಖ್ಯಗುರು ಪುಂಡಲೀಕ ಪೂಜಾರ, ಎಸ್.ಡಿ.ಎಂ.ಸಿ ಅಧ್ಯಕ್ಷ ಪರಮೇಶ್ವರ ಅನಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here